ಆಳ್ವಾಸ್‌ನಲ್ಲಿ ಕೇಂದ್ರ ಬಜೆಟ್ ವಿಶ್ಲೇಷಣೆ

ಜಾಹೀರಾತು/Advertisment
ಜಾಹೀರಾತು/Advertisment

 


ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ೨೦೨೨ನೇ ಸಾಲಿನ ಕೇಂದ್ರ ಬಜೆಟ್ ವಿಶ್ಲೇಷಣೆ ಕರ‍್ಯಕ್ರಮವನ್ನು ಆಯೋಜಿಸಲಾಯಿತು. 

ಕಲ್ಬಾವಿ ಕ್ಯಾಶ್ಯೂಸ್‌ನ ಆಡಳಿತ ಪಾಲುದಾರ ಪ್ರಕಾಶ್ ಕಲ್ಬಾವಿ ಮಾತನಾಡಿ, ಇಂದಿನ ಯುವಕರು ಉದ್ದಿಮೆಯಲ್ಲಿ ಹೊಸ ತಂತ್ರಜ್ಞಾನಗಳ ಅಳವಡಿಸಬೇಕು. ದೇಶದಲ್ಲಿ ನೀತಿಗಳನ್ನು ಪರಿಚಯಿಸುವುದು ಸುಲಭವಾಗಿ ಆಗುತ್ತಿದೆ. ಆದರೆ ಅವುಗಳ ಅನುಷ್ಠಾನ ವಿವಿಧ ಕಾರಣಗಳಿಂದ ನಿಧಾನ ಗತಿಯಲ್ಲಿ ಸಾಗುತ್ತಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ೩೬ ಟ್ರಿಲಿಯನ್‌ನಷ್ಟು ಕ್ರೆಡಿಟ್‌ಗಳ ಅಗತ್ಯವಿದೆ.ಅವುಗಳ ಮೇಲ್ವಿಚಾರಣೆ ನಡೆಸಲು ಇಂಡಿಪೆಂಡೆಂಟ್ ರೆಗ್ಯುಲೇಟರಿ ಸಿಸ್ಟಮ್ ಹಾಗೂ ಇ-ಲಿಂಕಿಂಗ್ ವ್ಯವಸ್ಥೆಯನ್ನು ಪರಿಚಯಿಸಬೇಕು ಎಂದರು.

ಕಾನ್‌ಫೆಡೆರೇಶನ್ ಆಫ್ ಇಂಡಿಯನ್ ಇಂಡಸ್ಟಿçಯ ಉಪಾಧ್ಯಕ್ಷ ಗೌರವ್ ಹೆಗ್ಡೆ, ಪ್ರಸ್ತುತ ಬಜೆಟ್‌ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿಲ್ಲ, ಪ್ರವಾಸೋದ್ಯಮಕ್ಕೆ ಅಗತ್ಯವಿರುವ ಮೂಲ ಸೌರ‍್ಯಗಳ ಅಭಿವೃದ್ಧಿ ಇನ್ನಷ್ಟು ಆಗಬೇಕಿದೆ ಎಂದರು.

ಕೃಷಿ ಹಾಗೂ ರೈತರ ಕಲ್ಯಾಣ ವಿಷಯದ ಕುರಿತು ಮಾತನಾಡಿದ ಪ್ರಗತಿಪರ ಕೃಷಿಕ ಹಾಗೂ ರಾಜಕೀಯ ಕಾರ್ಯಕರ್ತ ವಿಶ್ವೇಶ್ವರ ಭಟ್ ಮಾತನಾಡಿದರು. ಬ್ಯಾಂಕಿಂಗ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಂಗಳೂರಿನ ಯೂನಿಯನ್ ಬ್ಯಾಂಕ್ ಡೈರೆಕ್ಟರ್ ಜನರಲ್ ಮ್ಯಾನೇಜರ್ ಹಾಗೂ ಪ್ರಾದೇಶಿಕ ಮುಖ್ಯಸ್ಥ ಜೆ. ಮಹೇಶ್ ಮಾತನಾಡಿದರು. ಕ್ಯಾಪಿಟಲ್ ಎಕ್ಸ್ಪೆಂಡೆಚರ್ ಕುರಿತು ನಿವೃತ್ತ ಐಆರ್‌ಎಸ್ ಅಧಿಕಾರಿ ಜಯಪ್ರಕಾಶ್ ರಾವ್ ಮಾತನಾಡಿದರು. ಡೈರೆಕ್ಟ್ ಹಾಗೂ ಇನ್‌ಡೈರೆಕ್ಟ್ ಟ್ಯಾಕ್ಸ್ ಕುರಿತು ಮಂಗಳೂರಿನ ಸಿಎ ನಿತಿನ್ ಜೆ ಶೆಟ್ಟಿ ಮಾತನಾಡಿದರು. ವರ್ಚುವಲ್ ಡಿಜಿಟಲ್ ಅಸೆಟ್ಸ್ ಬಗ್ಗೆ ಸಿಎ ಅನ್ವೇಶ್ ಶೆಟ್ಟಿ ವಿವರಿಸಿದರು. 

ಅರ್ಥಶಾಸ್ತಜ್ಞ ಡಾ. ಜಿ.ವಿ ಜೋಷಿ ಹಾಗೂ ನಿಟ್ಟೆ ಸಂಸ್ಥೆಯ ಪ್ರಾಧ್ಯಾಪಕ ಡಾ. ಜ್ಞಾನೇಶ್ವರ್ ಎಂ. ಪೈ ಪ್ಯಾನೆಲ್ ಡಿಸ್ಕಶನ್‌ನ ಸಮನ್ವಯಕಾರರಾಗಿ ಕಾರ್ಯನಿರ್ವಹಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪೋಸ್ಟರ್ ಪ್ರೆಸೆಂಟೇಶನ್ ಹಾಗೂ ಗ್ರೂಪ್ ಡಿಸ್ಕಶನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 

ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ, ಎಂಬಿಎ ವಿಭಾಗ ಮುಖ್ಯಸ್ಥೆ ಪ್ರಿಯಾ ಸಿಕ್ವೇರಾ ಉಪಸ್ಥಿತರಿದ್ದರು. ಜಾನ್ಸನ್ ಫೆರ್ನಾಂಡಿಸ್    ಅತಿಥಿಗಳನ್ನು ಪರಿಚಯಿಸಿ, ಉಪನ್ಯಾಸಕಿ ರ‍್ಷಿತಾ ವಂದಿಸಿದರು. ಪುನೀತ್ ಕೆ.ಜೆ ಹಾಗೂ ದೀಪಕ್ ನಿರೂಪಿಸಿದರು.

Post a Comment

0 Comments