ಕೇಂದ್ರದಿಂದ ದುಡಿಯುವ ವರ್ಗಕ್ಕೆ ದ್ರೋಹ-ಸುನೀಲ್ ಕುಮಾರ್ ಬಜಾಲ್ ಆಕ್ರೋಶ

ಜಾಹೀರಾತು/Advertisment
ಜಾಹೀರಾತು/Advertisment

 


ಮೂಡುಬಿದಿರೆ : ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಇಲ್ಲಿ ಎಲ್ಲರೂ ಮಾತನಾಡುವ, ಪ್ರತಿಭಟಿಸುವ ಅಭಿವ್ಯಕ್ತ ಸ್ವಾತಂತ್ರ್ಯವನ್ನು ಹೊಂದಿಲ್ಲ. ಆದರೆ ನಮ್ಮನಾಳುವ ಸರಕಾರಗಳು ಕಾರ್ಮಿಕ ವರ್ಗಕ್ಕೆ ಸಿಗುವ ಸವಾಲುಗಳು ಹಾಗೂ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ದುಡಿಯುವ ವರ್ಗಕ್ಕೆ ದ್ರೋಹ ಮಾಡುತ್ತಿದ್ದಾರೆ ಎಂದು ಸಿ.ಐ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಸೋಮವಾದಂದು ಮೂಡುಬಿದಿರೆ ತಾಲೂಕು ಕಚೇರಿ ಮುಂಭಾಗದಲ್ಲಿ ಕೇಂದ್ರ ಕಾರ್ಮಿಕರ ಸಂಘಟನೆಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮಹಾ ಮುಷ್ಕರದ ಅಂಗವಾಗಿ ಪ್ರತಿಭಟನೆ ನಡೆಯಿತು.

ಇಡೀ ಕಾನೂನುಗಳನ್ನು ಬಂಡವಾಳ ಶಾಹಿಗಳ ಪರವಾಗಿ ತಿದ್ದುಪಡಿ ಮಾಡಲಾಗುತ್ತಿದೆ. ಕಾರ್ಮಿಕ ವರ್ಗದವರಾಗಿರುವ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಹಮಾಲಿ ನೌಕರರು ಸಹಿತ ಬಸ್‌ನಲ್ಲಿ ದುಡಿಯುವ ದಿನಗೂಲಿ ನೌಕರರು ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಈ ಸಂಬಳಕ್ಕೆ ಆಡಳಿತ ಮಾಡುವವರು ಪಡೆದು ತೋರಿಸಲಿ ಎಂದು ಸವಾಲು ಹಾಕಿದರು. ಜಾಗತೀಕರಣ, 21ನೇ ಅಖಿಲ ಭಾರತ ಮಹಾ ಮುಷ್ಕರ ನಿರಂತರವಾಗಿ ನಡೆಯುತ್ತಿದೆ, ಇದು ಎಚ್ಚರಿಕೆಯ ಗಂಟೆಯಾಗಿದೆ. 


ನಂತರ ಹಲವಾರು ನೌಕರರ ಬೇಡಿಕೆಗಳನ್ನು ಮುಂದಿಟ್ಟು ಮೂಡುಬಿದಿರೆ ತಹಶೀಲ್ದಾರ್ ಪುಟ್ಟರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಯಾಧವ ಶೆಟ್ಟಿ, ಬಿಸಿಯೂಟ ನೌಕರರ ಜಿಲ್ಲಾ ಕಾರ್ಯದರ್ಶಿ ಗಿರಿಜ, ಮೂಡುಬಿದಿರೆ ವಲಯದ ಪ್ರಧಾನಟಿಯುನ ಅಧ್ಯಕ್ಷೆ ರಮಣಿ, ಕಾರ್ಯದರ್ಶಿ ರಾಧ, ಉಪಾಧ್ಯಕ್ಷ ಶಂಕರ ವಾಲ್ಪಾಡಿ, ಜೊತೆ ಕಾರ್ಯದರ್ಶಿ ಲಕ್ಷ್ಮೀ , ದಲಿತ ಸಂಘದ ಕೃಷ್ಣಪ್ಪ ಕೋಣಾಜೆ, ಸಮಿತಿ ಸದಸ್ಯರಾದ ಕೃಷ್ಣಪ್ಪ, ಜಯಾನಂದ ಪೂಜಾರಿ ಮಾರೂರು ಇದ್ದರು.

Post a Comment

0 Comments