ಮೂಡಬಿದಿರೆ: ಕೂಲಿ ಕಾರ್ಮಿಕರಿಗೆ ಇ-ಶ್ರಮ್ ನೋಂದಣಿ ಜಾಗೃತಿ ಅಭಿಯಾನ

ಜಾಹೀರಾತು/Advertisment
ಜಾಹೀರಾತು/Advertisment


ಮೂಡುಬಿದಿರೆ ; ಶಿರ್ತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೊಣಾಜೆ ಅಂಗನವಾಡಿ ಕೇಂದ್ರದಲ್ಲಿ ನರೇಗಾ ಯೋಜನೆಯ ಕೂಲಿಕಾರ್ಮಿಕರಿಗೆ ಹಾಗೂ ಅಸಂಘಟಿಕ ಕೂಲಿ ಕಾರ್ಮಿಕರಿಗೆ *ಇ-ಶ್ರಮ್ ನೋಂದಣಿಯ ಜಾಗೃತಿ* ಹಾಗೂ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಮೂಡುಬಿದಿರೆ ತಾಲೂಕು ಪಂಚಾಯತ್ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಚಾಲನೆ ನೀಡಿದರು. 

ಕಾರ್ಯನಿರ್ವಾಹಕ ಅಧಿಕಾರಿಯವರು ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್  ನಿಂದಾಗುವ ಪ್ರಯೋಜನ ಹಾಗೂ ಮನರೇಗಾ ಯೋಜನೆಯ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಬಳಿಕ ಇ-ಶ್ರಮ್ ಕಾರ್ಡ್ ನ್ನು ವಿತರಿಸಲಾಯಿತು. ೩೦ ಇ-ಶ್ರಮ್  ಕಾರ್ಡ್ ನೋಂದಣಿ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಅಂಗನವಾಡಿ ಮಕ್ಕಳಿಗೆ ಬನ್ನಿ ಸಮವಸ್ತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಚರು, ಉಪಾಧ್ಯಕ್ಷರು,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ,ತಾಲೂಕು ಐಇಸಿ‌ ಸಂಯೋಜಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಗೂ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Post a Comment

0 Comments