ಮೂಡುಬಿದಿರೆ: ವಕೀಲೆ ಶ್ವೇತಾ ಜೈನ್ ಅವರಿಗೆ ಗೌರವ ಸನ್ಮಾನ

ಜಾಹೀರಾತು/Advertisment
ಜಾಹೀರಾತು/Advertisment

ಬೆಳಗಾವಿ:  ದಕ್ಷಿಣ ಕನ್ನಡ ದಿಗಂಬರ ಜೈನ ಮೈತ್ರಿ ಕೂಟ( ರಿ) ಬೆಳಗಾವಿ ಇದರ  ದಶಮಾನೋತ್ಸವ ಸಮಾರಂಭವು ಅದ್ದೂರಿಯಾಗಿ  ನಡೆಯಿತು. 

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ   ಮೂಡುಬಿದಿರೆಯ ಖ್ಯಾತ ನ್ಯಾಯವಾದಿ ಶ್ವೇತಾ ಜೈನ್  ಅವರನ್ನು  ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಕಾನೂನು  ಕ್ಷೇತ್ರಗಳಲ್ಲಿ ನಿರಂತರವಾಗಿ ಮಾಡುತ್ತಿರುವ  ಸೇವೆಯನ್ನು ಗುರುತಿಸಿ  ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ದಿಗಂಬರ ಜೈನ ಮೈತ್ರಿ ಕೂಟ ಬೆಳಗಾವಿ ಇದರ  ಸ್ಥಾಪಕಾಧ್ಯಕ್ಷ ಬಿ ಗುಣಪಾಲ ಹೆಗ್ಡೆ, ಅಧ್ಯಕ್ಷ ಮಹಾವೀರ ಪೂವಣಿ,  ವಿ.ಜೀವಂಧರ್ ಕುಮಾರ್ ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು  ಉಪಸ್ಥಿತರಿದ್ದರು.

Post a Comment

0 Comments