ಮಂಗಳೂರು: ಮಾರಕಾಸ್ತ್ರಗಳಿಂದಯುವಕನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ರಾಹುಲ್ ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಆಗಿದ್ದ. ವೈಯಕ್ತಿಕ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.
0 Comments