ಮಂಗಳೂರು ವಿ.ವಿ ಯಲ್ಲಿ ಉದ್ಯೋಗ ಮಾಹಿತಿ ಮಾರ್ಗದರ್ಶನ ಕೇಂದ್ರ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿ ಮೇ 14, 15ರಂದು ಉದ್ಯೋಗ ಮೇಳ ನಡೆಯಲಿದೆ.
ಮ್ಯಾಜಿಕ್ ಬಸ್ನ ಕರ್ನಾಟಕ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳ ವಲಯದ ಕ್ಲಸ್ಟರ್ ಮ್ಯಾನೇಜರ್ ಚಿರಂಜೀವಿ ಅಂಬರ್ನಾಥ್ 14ರಂದು ಬೆಳಗ್ಗೆ 10.30ಕ್ಕೆ ಉದ್ಯೋಗ ಮೇಳವನ್ನು ಮಂಗಳಾ ಸಭಾಂಗಣದಲ್ಲಿ ಉದ್ಘಾಟಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಕುಲಸಚಿವ (ಪರೀಕ್ಷಾಂಗ) ಪ್ರೊ.ಪಿ.ಎಲ್, ಧರ್ಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಯುಐಜಿಬಿ ಉಪ ಮುಖ್ಯಸ್ಥ ಎಸ್.ಜೆ. ಹೇಮಚಂದ್ರ, ಹಣಕಾಸು ಅಧಿಕಾರಿ, ಪ್ರೊ. ಕೆ.ಎಸ್ ಜಯಪ್ಪ, ಯುಟಿಪಿಸಿ ಯೋಜನೆ ಆಧರಿತ ಸಲಹೆಗಾರ್ತಿ ಶಾರದಾ ಎಚ್.ಎಸ್. ಹಾಜರಿರುತ್ತಾರೆ.
ಎರಡು ದಿನಗಳ ಕಾಲ ನಡೆಯಲಿರುವ ಉದ್ಯೋಗ ಮೇಳದಲ್ಲಿ ಸುಮಾರು 40 ಕಂಪೆನಿಗಳು ಭಾಗವಹಿಸಲಿದ್ದು, ಸುಮಾರು 11,100 ಹುದ್ದೆಗಳಿಗೆ ಅರ್ಹರ ನೇಮಕಾತಿ ನಡೆಯಲಿದೆ.
ಯುಐಜಿಬಿ ಮತ್ತು ಯುಟಿಪಿಸಿ: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಘಟಕ, ಸಂಯೋಜಿತ, ಸ್ವಾಯತ್ತ ಕಾಲೇಜುಗಳಿಂದ ಮತ್ತು ಮಂಗಳೂರು ವಿವಿ ಕ್ಯಾಂಪಸ್ನ ವಿದ್ಯಾರ್ಥಿಗಳಿಂದ ಸುಮಾರು 10,000ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು ಅದನ್ನು ಮ್ಯಾಜಿಕ್ ಬಸ್ ಎಂಬ ಸರ್ಕಾರೇತರ ಸಂಸ್ಥೆಗೆ ಹಸ್ತಾಂತರಿಸಿದೆ. ಸಂಸ್ಥೆ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಟೋಕನ್ ಒದಗಿಸಿ ನೇಮಕಾತಿಗೆ ನೇರ ಸಂದರ್ಶನವನ್ನು ನಡೆಸಲಿದ್ದು ಕನಿಷ್ಟ 10 ಸಾವಿರ ರೂ ವೇತನ ಇರಲಿದೆ.
ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಲೂ ಅವಕಾಶ ನೀಡಲಾಗಿದೆ. ಸಂದರ್ಶನಕ್ಕೆ ಬರುವಾಗ ಬಯೋಡಾಟ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ 2 ಫೋಟೊ, ಎಸೆಸೆಲ್ಸಿ ಅಂಕಪಟ್ಟಿಯ ಜತೆಗೆ ಗರಿಷ್ಠ ಅರ್ಹತೆಯ ಅಂಕಪಟ್ಟಿ ತರಬೇಕು. ಅಂತಿಮ ವರ್ಷದ ಪದವಿ , ಸ್ನಾತಕೋತ್ತರ ಪದವಿ ಅಥವಾ ಪ್ರಸ್ತುತ ಓದುತ್ತಿರುವವರು
ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
0 Comments