ಬೆಳ್ತಂಗಡಿ: 40% ಕಮಿಷನ್ ದಂಧೆ ವಿರುದ್ಧ ಬೆಳ್ತಂಗಡಿಯ ಯುವ ಕಾಂಗ್ರೆಸ್ ‘ವಿಭಿನ್ನ ಚೀಲ ಚಳವಳಿ’ಯನ್ನು ಹಮ್ಮಿಕೊಂಡಿದೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಚೀಲದಲ್ಲಿ ಹಣ ಶೇಖರಣೆ ಮಾಡಿ ಹಂಚುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಕೂಡ ಯುವ ಕಾಂಗ್ರೆಸ್ ಮಾಡಿದೆ.
ಯುವ ಕಾಂಗ್ರೆಸ್ ಪಡೆ ಬೆಳ್ತಂಗಡಿ ನಗರದಾದ್ಯಂತ ಶಾಸಕರು ತಾಲೂಕಿನಲ್ಲಿ ನಡೆಸುತ್ತಿರುವ ಭ್ರಷ್ಟಾಚಾರವನ್ನು ಸಾರ್ವಜನಿಕರ ಗಮನ ಸೆಳೆಯುವ ಉದ್ದೇಶದಿಂದ ಪಾಸ್ಟಿಕ್ ಚೀಲದ ಮೇಲೆ “ಚೀಲ ಚಳುವಳಿ 40% ಬೆಳ್ತಂಗಡಿ” ಎಂದು ಬರೆದು ರಸ್ತೆಯ ಇಕ್ಕೆಲಗಳಲ್ಲಿ ಹಾಕಿದ್ದರು. ಇದನ್ನು ಗಮನಿಸಿದ ಶಾಸಕರ ಹಿಂಬಾಲಕರು ಶಾಸಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅದನ್ನು ತೆರವುಗೊಳಿಸಲಾಗಿದೆ. ಈ ಹಿನ್ನೆಲೆ ನಮ್ಮ ಪ್ರತಿಭಟನೆಯ ಭಾಗವಾಗಿ ಅಳವಡಿಸಲಾಗಿದ್ದ ಚೀಲವನ್ನು ಬಿಜೆಪಿ ನೇತೃತ್ವದ ಪಟ್ಟಣ ಪಂಚಾಯತ್ ಆಡಳಿತ ಕಿತ್ತೆಸೆಯುವ ಮೂಲಕ ಭೃಷ್ಟಾಚಾರ ವಿರುದ್ಧದ ಹೋರಾಟವನ್ನು ಹತ್ತಿಕ್ಕಿದೆ ಎಂದು ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಅನಿಲ್ ಪೈ ತಿಳಿಸಿದ್ದಾರೆ.
0 Comments