ಮೂಡುಬಿದಿರೆ:- ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜೂನ್ 1 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬುಧವಾರ ಮಧ್ಯಾಹ್ನ 1.30ಕ್ಕೆ ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನಿಂದ ಹೊರಟು 2.30ಕ್ಕೆ ಮೂಡುಬಿದಿರೆಗೆ ಆಗಮಿಸುವರು. 3 ಗಂಟೆಗೆ ಆಳ್ವಾಸ್ ಕಾಲೇಜಿನಲ್ಲಿ ಪ್ರಾರಂಭಗೊಂಡ ವಿದ್ಯಾ ನಿಧಿ ವಿದ್ಯಾರ್ಥಿಯು ಸಂವಾದ ನಡೆಸಲಿದ್ದಾರೆ.
ಸಂಜೆ 5 ಗಂಟೆಗೆ ಮೂಡುಬಿದಿರೆಯಿಂದ ಹೊರಟು 6 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ 6.50ಕ್ಕೆ ವಿಮಾನದ ಮೂಲಕ ಹೊರಟು 7.40ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಪ್ರಕಟಣೆಗೆ ಆಗಮಿಸಿದರು.
0 Comments