ಮಂಗಳೂರು: ಮಂಗಳೂರು ವಿವಿ ಕಾಲೇಜಿನ ಹಿಜಾಬ್ ವಿವಾದದ ವಿದ್ಯಾರ್ಥಿನಿಯರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಈ ವಿದ್ಯಾರ್ಥಿನಿಯರಿಗೆ ನೋಟಿಸ್ಗೆ ಮೂರು ದಿನಗಳೊಳಗೆ ಉತ್ತರಿಸುವಂತೆ ಕಾಲೇಜು ಪ್ರಾಂಶುಪಾಲೆ ಡಾ.ಅನಸೂಯ ರೈ ನೋಟಿಸ್ ಜಾರಿ ಮಾಡಿದ್ದಾರೆ.
ಮಂಗಳೂರು ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಎಂಬ ಆದೇಶವಿದೆ. ಈ ಮಂಗಳೂರು ವಿವಿಯಿಂದ ಮಾರ್ಗಸೂಚಿ ಹಾಗೂ ಹೈಕೋರ್ಟ್ ನ ಆದೇಶವನ್ನು ಎಲ್ಲಾ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ. ಕಾಲೇಜಿನಲ್ಲಿ ಸುಮಾರು 1,600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ, ಕೇವಲ ಬೆರಳಣಿಕೆಯಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಕಾಲೇಜಿನಲ್ಲಿ ಆತಂಕ, ಶಾಂತಿಭಂಗ ಮತ್ತು ಅಶಿಸ್ತು ಸೃಷ್ಟಿ ನಡೆಯುತ್ತಿದೆ.
ಜೊತೆಗೆ ನೀವು ಬಾಹ್ಯಶಕ್ತಿಯೊಂದಿಗೆ ಸೇರಿ ಸುದ್ದಿಗೋಷ್ಠಿ ನಡೆಸಿ ಕಾಲೇಜು ಹಾಗೂ ಪ್ರಾಂಶುಪಾಲರ ವಿರುದ್ಧ ಹೇಳಿಕೆಯನ್ನು ನೀಡಿದ್ದಾರೆ.
ಆಸ್ಪತ್ರೆಯಲ್ಲಿ ಘನತೆಗೆ ಧಕ್ಕೆ ಉಂಟು ಮಾಡಿರುವುದನ್ನು ಗಮನಿಸಲಾಗಿದೆ. ಈ ರೀತಿಯ ವರ್ತನೆಯ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ತೆಗೆದುಕೊಳ್ಳಬಾರದು ಎಂಬ ಸಮಜಾಯಿಷಿಯನ್ನು ಈ ಪತ್ರ ತಲುಪಿದ ಮೂರು ದಿನದ ಒಳಗೆ ಪ್ರಾಂಶುಪಾಲರಿಗೆ ನೀಡುವಂತೆ ಸೂಚಿಸಲಾಗಿದೆ ಎಂದು ಸೂಚನೆಗಳನ್ನು ನೀಡಲಾಗಿದೆ.
0 Comments