ಮೂಡುಬಿದಿರೆ ನಗರ ಶಕ್ತಿಕೇಂದ್ರ ಮತ್ತು ಪುತ್ತಿಗೆ ಮಹಾಶಕ್ತಿ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

 

ಮೂಡುಬಿದಿರೆ: ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೂಡುಬಿದಿರೆ ತಾಲೂಕಿನ ನಗರ ಶಕ್ತಿಕೇಂದ್ರ ಮತ್ತು ಪುತ್ತಿಗೆ ಮಹಾಶಕ್ತಿ ಕೇಂದ್ರದ ವತಿಯಿಂದ "ಕಾಮಧೇನು" ಸಭಾಂಗಣದಲ್ಲಿ ಯೋಗ ಪ್ರದರ್ಶನ ನಡೆಯಿತು.

 ಶಾಸಕ ಉಮಾನಾಥ ಕೋಟ್ಯಾನ್ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ನಮ್ಮ ಆರೋಗ್ಯದ ಎಲ್ಲಾ ಸಮಸ್ಯೆಗಳಿಗೂ ಯೋಗದಲ್ಲಿ ಮದ್ದು ಇದೆ. ಯೋಗವನ್ನು ದಿನ ನಿತ್ಯ ಮಾಡುವುದರಿಂದ ಆರೋಗ್ಯವಂತರಾಗಿರುತ್ತೇವೆ ಎಂದು ಹೇಳಿದರು.

ದ.ಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಪುತ್ತಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕುಮಾರ್, ಬಿಜೆಪಿಯ ಹಿರಿಯ ಮುಖಂಡರಾದ ದಯಾನಂದ ಪೈ, ಯೋಗ ಶಿಕ್ಷಕ ರಾಘವೇಂದ್ರ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿ ಗೋಪಾಲ್ ಶೆಟ್ಟಿಗಾರ್ , ನಗರ ಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ ಉಪಸ್ಥಿತರಿದ್ದರು.

Post a Comment

0 Comments

Advertisement