ಬಿಆರ್‌ಪಿ ಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನ ಸಾಮಾಗ್ರಿ ವಿತರಣೆ

ಮೂಡುಬಿದಿರೆ : ಇಲ್ಲಿನ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನ ಸಾಮಾಗ್ರಿ ಹಾಗೂ ಬ್ಯಾಗ್‌ಗಳನ್ನು ವಿತರಿಸಲಾಯಿತು. 

  ಆಡಳಿತ ಮಂಡಳಿಯ ಅಧ್ಯಕ್ಷ ರಾಮನಾಥ ಭಟ್ ಅಧ್ಯಕ್ಷತೆ ವಹಿಸಿದ್ದರು. ದಾನಿ, ಶಾಲಾ ಹಳೆ ವಿದ್ಯಾರ್ಥಿ ಧೀರಜ್ ಶೆಣೈ, ನಿವೇದಿತಾ ಧೀರಜ್ ಶೆಣೈ, ಕೃತಿಕಾ ಕಾಮತ್, ಶಾಲಾ ಹಿತೈಷಿ ಸುಮಂತ್ ಕಾಮತ್, ಮುಖ್ಯ ಶಿಕ್ಷಕಿ ಪದ್ಮಜಾ, ಶಿಕ್ಷಕ ಕಿರಣ್ ಕುಮಾರ್, ಭರತ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

Post a Comment

0 Comments

Advertisement