ಮೂಡುಬಿದಿರೆ : ತೌಳವ ಸಂಸ್ಕೃತಿಯ ಎಲ್ಲಾ ತಿರುಳನ್ನೂ ಒಳಗೊಂಡಿರುವ ತುಳು ಭಾಷೆಯ ಆಕರ ಗ್ರಂಥವಾಗಿರುವ ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ಟರು ಬರೆದ ಮಂದಾರ ರಾಮಾಯಣದ ಪಾರಾಯಣದಿಂದಾಗುವ ಮಹತ್ವವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತುಳುವರ್ಲ್ಡ್ (ರಿ) ಮಂಗಳೂರು, ಧವಲತ್ರಯ ಜೈನ ಕಾಶಿ ಟ್ರಸ್ಟ್ ಮೂಡುಬಿದಿರೆ, ತುಳುಕೂಟ ಛಿದ್ರ ಹಾಗೂ ಮಂದಾರ ಪ್ರತಿಷ್ಠಾನ ಟ್ರಸ್ಟ್' ಇವುಗಳ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಸಭಾಭವ ನದಲ್ಲಿ ಆ.೩೧ರಿಂದ ಆ.೩ರವರೆಗೆ ಏಳು ದಿನಗಳ ಕಾಲ "ಏಳದ ಮಂದಾರ ರಾಮಾಯಣ" ಕಾರ್ಯಕ್ರಮವು ನಡೆಯಲಿದೆ ಎಂದು ಜೈನ ಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮವು ಜುಲೈ ೩೧ರಂದು ಮಧ್ಯಾಹ್ನ 4ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುವಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ ಕೋಟ್ಯಾ ನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಕೊಲ್ಲಾಪುರ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಅ ನುವಂಶಿಕ ಪುರೋಹಿತ ಬಾಲಚಂದ್ರ ಹರಿಲಾತ್ಕರ್, ಪಟ್ಲಶೆಟ್ಟಿ ಸುದೇಶ್ ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.
ಪ್ರತಿ ದಿನ ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಶನಿವಾರ ಸಂಜೆ ನಾಲ್ಕು ಗಂಟೆಗೆ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ನೆರವೇರಿಸಲಿದ್ದಾರೆ.
ಮಂದಾರ ಪ್ರತಿಷ್ಠಾನದ ಯೋಜನೆ “ಇಲ್ಲ್ ಇಲ್ಲ್ ಗ್ ಮಂದಾರ ರಾಮಾಯಣ" ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳೀನ್ ಕುಮಾರ್ ಕಟೀಲ್ ಚಾಲನೆ ನೀಡಲಿದ್ದಾರೆ.
ತುಳುಕೂಟ ಬೆದ್ರ ಅಧ್ಯಕ್ಷ ಧನಕೀರ್ತಿ ಬಲಿಪ, ಸ್ಥಾಪಕ ಅಧ್ಯಕ್ಷ ಚಂದ್ರಹಾಸ ದೇವಾಡಿಗ, ಮಂದಾರ ಪ್ರತಿಷ್ಠಾನದ ಉಪಾಧ್ಯಕ್ಷ ರಾಜೇಶ್ ಭಟ್ ಮಂದಾರ, ಕಾರ್ಯದರ್ಶಿ ಪ್ರಮೋದ್ ಸಪ್ಪೆ, ತುಳುವರ್ಲ್ಡ್ ಅಧ್ಯಕ್ಷ ಡಾ. ರಾಜೇಶ್ ಆಳ್ವ ಬದಿಯಡ್ಕ, ಕಾರ್ಯದರ್ಶಿ ಮಾಧವ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
0 Comments