ಕಾರ್ಕಳ: ರಾಜ್ಯ ಮಟ್ಟದ ಯುವ ಕಬಡ್ಡಿ ಆಟಗಾರ, ಹೆಬ್ರಿ ತಾಲೂಕಿನ ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಶೆಟ್ಟಿ (32) ಶುಕ್ರವಾರ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ತೀವೃ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಉಡುಪಿಯ ಫೈನಾನ್ಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಸುಶಾಂತ್ ಶೆಟ್ಟಿಗೆ ಕೆಲ ದಿನಗಳ ಹಿಂದೆ ಸ್ವಲ್ಪಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಪರೀತ ಜ್ವರದ ಕಾರಣದಿಂದ ಮೂತ್ರಪಿಂಡ ಮತ್ತು ಲಿವರ್ನ ಮೇಲೂ ವ್ಯತಿರಿಕ್ತ ಪರಿಣಾಮಬೀರಿದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇಲಿಜ್ವರದಿಂದ ಜಾಂಡೀಸ್ ಉಲ್ಬಣಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಅವರ ಸಾವಿಗೆ ನಿಖರವಾದ ಕಾರಣ ವೈದ್ಯಕೀಯ ಪರೀಕ್ಷೆಯಿಂದಷ್ಟೇ ತಿಳಿಯಬೇಕಿದೆ.
ಶೋಕ ಸಾಗರದಲ್ಲಿ ಕುಟುಂಬ: ಅಭಿಮಾನಿಗಳ ಕಂಬನಿ
ಸುಶಾಂತ್ ಶೆಟ್ಟಿ ಶಾಲಾ ದಿನಗಳಲ್ಲಿ ಉತ್ತಮ ಕಬಡ್ಡಿ ಪಟುವಾಗಿ ರಾಜ್ಯ ಮಟ್ಟದಲ್ಲಿ ಉತ್ತಮ ಆಟಗಾರರಿದ್ದು, ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಅತ್ಯಂತ ಕ್ರಿಯಾಶೀಲ ವ್ಯಕ್ತಿತ್ವದ ಅವರ ಅಗಲುವಿಕೆ ಇಡೀ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ಮೃತ ಸುಶಾಂತ್ ,ಪತ್ನಿ, ಮಗು, ತಂದೆ-ತಾಯಿ ಸಹೋದರ, ಸಹೋದರಿ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
0 Comments