ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಬಂಧಿತರನ್ನು ಜಾಕಿರ್ ಸವಣೂರು, ಮೊಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ. ಇಬ್ಬರಿಗೆ ಹಲವು ಕ್ರಿಮಿನಲ್ ಪ್ರಕರಣ ಹಿನ್ನೆಲೆ ಇದೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಕಾಸರಗೋಡಿನಲ್ಲಿ ಬಂಧನ ಮಾಡಲಾಗಿದೆ. ಸದ್ಯ ಅವರನ್ನು ವಿಟ್ಲ ಠಾಣೆಗೆ ಕರೆತಂದಿದ್ದಾರೆ. 21 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.