ಕಾಲಮಿತಿಯಲ್ಲಿ 1800 ಕೋಟಿ ರೂ. ವೆಚ್ಚದಲ್ಲಿ ರಾಜ ಕಾಲುವೆ ಅಭಿವೃದ್ಧಿ: ವಿಧಾನಸಭೆಯಲ್ಲಿ ಬೊಮ್ಮಾಯಿ

ಜಾಹೀರಾತು/Advertisment
ಜಾಹೀರಾತು/Advertisment

 

ಬೆಂಗಳೂರು: ಯಾವುದೇ ಒತ್ತಡಕ್ಕೆ ಮಣಿಯದೇ ಬೆಂಗಳೂರಿನ ರಾಜಕಾಲುವೆ ತೆರವು ಮಾಡಲಾಗುವುದು. ಕಾಲಮಿತಿಯಲ್ಲಿ 1800 ಕೋಟಿ ರೂ. ವೆಚ್ಚದಲ್ಲಿ ರಾಜ ಕಾಲುವೆ ಅಭಿವೃದ್ಧಿಪಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಬೆಂಗಳೂರು ನಗರದಲ್ಲಿ 850 ಕಿಮೀ ರಾಜಕಾಲುವೆ ಇದೆ. ಈ ಪೈಕಿ 450 ಕಿಮೀ ಅಭಿವೃದ್ಧಿಗೆ ಬಾಕಿಯಿದೆ. ಕಳೆದ ಬಾರಿ 1500 ಕೋಟಿ ರೂ.ನ್ನು ರಾಜಕಾಲುವೆ ಅಭಿವೃದ್ಧಿಗೆ ಮೀಸಲಿಟ್ಟಿದ್ದೆವು. ಈ ಬಾರಿ ಮತ್ತೆ ಹೆಚ್ಚುವರಿಯಾಗಿ 300 ಕೋಟಿ ರೂ. ನೀಡುತ್ತೇವೆ. ರಾಜಕಾಲುವೆ ಅಭಿವೃದ್ಧಿಯನ್ನು ನಾವು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು. ಎರಡು ವರ್ಷದಲ್ಲಿ ನಾವು ಈ ಕಾಮಗಾರಿ ಮುಕ್ತಾಯಗೊಳಿಸುತ್ತೇವೆ ಎಂದು ಹೇಳಿದರು.

ಬೆಂಗಳೂರಿನ ಎಂಟು ವಿಭಾಗಗಳ ಪೈಕಿ ಎರಡು ಕಡೆ ಮಾತ್ರ ರಾಜಕಾಲುವೆ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಸಮಸ್ಯೆ ಹೆಚ್ಚಿದೆ. ಈ ಕ್ಷೇತ್ರದಲ್ಲಿ ಬೆಂಗಳೂರಿನ ಒಟ್ಟು ಹೊರ ಹೋಗುವ ನೀರಿನ ಪೈಕಿ ಶೇ.80 ರಷ್ಟು ಹಾದು ಹೋಗುತ್ತದೆ. 69 ಕೆರೆ ಇಲ್ಲಿದೆ. ಹೀಗಾಗಿ ಸಮಸ್ಯೆ ಹೆಚ್ಚಿದೆ ಎಂದು ವಿವರಿಸಿದರು.

ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ, ಲೇಔಟ್, ವಸತಿ ಸಮುಚ್ಛಯಗಳನ್ನು ನಿರ್ಮಿಸಿದ ಕಾರಣ, ಮಳೆ ನೀರು ಸರಾಗವಾಗಿ ಹರಿಯದೇ ಬಳಹಷ್ಟು ತೊಂದರೆಗಳಾಗಿವೆ. ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಅವರ

ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.   ಸನ್ಮಾನ್ಯ ಮುಖ್ಯಮಂತ್ರಿಗಳು.

ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾಮಗಾರಿಯನ್ನು ಯಾವುದೇ ಒತ್ತಡಕ್ಕೆ ಒಳಗಾಗದೇ ನಾವು ಮಾಡುತ್ತೇವೆ. ಬ್ಯಾಂಡ್ ಬೆಂಗಳೂರಿಗೆ ಧಕ್ಕೆಯಾಗುವುದಕ್ಕೆ ನಾವು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

Post a Comment

0 Comments