ಕರುನಾಡಿಗೆ ಮತ್ತೆ ಬರಲಿದ್ದಾರೆ ಪ್ರಧಾನಿ ಮೋದಿ.!ತಾಯಿ ಚಾಮುಂಡೇಶ್ವರಿಗೆ ನಮೋ ನಮಃ

ಜಾಹೀರಾತು/Advertisment
ಜಾಹೀರಾತು/Advertisment


 ದಸರಾ ಉದ್ಘಾಟನೆಯನ್ನು ಈ ಬಾರಿ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮುರವರು ನೆರವೇರಿಸುತ್ತಿರುವುದು ಹೊಸ ಮೆರಗು ಬಂದಿತ್ತು. ಇದೀಗ ಉದ್ಘಾಟನೆ ಮಾತ್ರವಲ್ಲದೆ ದಸರಾ ಜಂಬೂ ಸವಾರಿಯ ವಿಚಾರಕ್ಕೂ ಈ ಬಾರಿಯ ದಸರಾ ಮಹತ್ವಪೂರ್ಣವಾಗಿದೆ. ಕಾರಣ, ದಸರಾ ಜಂಬೂ ಸವಾರಿಯ ಮೆರವಣಿಗೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಲಿದ್ದಾರೆ. ಆನೆಯ ಮೇಲಿನ ಚಿನ್ನದ ಅಂಬಾರಿಯಲ್ಲಿ ಕುಳಿತ ಚಾಮುಂಡಿ ತಾಯಿಗೆ ಮೋದಿ ಪುಷ್ಪಾರಾರ್ಚನೆ ನೆರವೇರಿಸಲಿದ್ದಾರೆ. ಪ್ರಧಾನ ಮಂತ್ರಿಯೊಬ್ಬರು ಚಿನ್ನದ ಅಂಬಾರಿಗೆ ಪುಷ್ಪಾರಾರ್ಚನೆ ಮಾಡ್ತಿರೋದು ಇದೇ ಮೊದಲು ಈ ಕಾರಣಕ್ಕೆ ಈ ಬಾರಿಯ ದಸರಾ ಐತಿಹಾಸಿಕ ದಾಖಲೆ ಆಗಲಿದೆ.

ಮೂರು ತಿಂಗಳ ಹಿಂದೆಯಷ್ಟೆ ವಿಶ್ವ ಯೋಗ ದಿನಕ್ಕಾಗಿ ಮೈಸೂರಿಗೆ ಬಂದಿದ್ದ ಪ್ರಧಾನಿ ಮೋದಿ, ಅಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡಿ ದರ್ಶನ ಪಡೆದಿದ್ದರು. ಅವತ್ತು ಇಲ್ಲಿನ ದಸರಾ ಬಗ್ಗೆ ಚಾಮುಂಡಿ ತಾಯಿಯ ಉತ್ಸವ ಮೂರ್ತಿಯ ಮೆರವಣಿಗೆ ಬಗ್ಗೆ ಪ್ರಧಾನಿಗಳಿಗೆ ವಿವರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಪ್ರಧಾನಿಗೆ ಆಹ್ವಾನ ನೀಡಿತ್ತು. ಆಹ್ವಾನಕ್ಕೆ ಮೋದಿ ಒಪ್ಪಿದ್ದಾರೆ.

Post a Comment

0 Comments