ಬೆಂಗಳೂರು: ರಿಷಬ್ ಶೆಟ್ಟಿ ನಟನೆಯ 'ಕಾಂತಾರ' ಚಿತ್ರಕ್ಕೆ ದೇಶಾದ್ಯಂತ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ. 'ಕಾಂತಾರ' ಚಿತ್ರಕ್ಕೆ ಮತ್ತು ನಾಯಕ ನಟ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಬೇಕು ಎಂದು ಪ್ರೇಕ್ಷಕರು ಬೇಡಿಕೆ ಇಟ್ಟಿದ್ದಾರೆ.
ಈ ಚಿತ್ರವು ಪ್ರೇಕ್ಷಕರ ನಿರೀಕ್ಷೆಯನ್ನು ಮೀರಿ ಯಶಸ್ವಿಯಾಗಿದೆ. ಅದರಲ್ಲೂ ಭಾರತದಾದ್ಯಂತದ ಸಿನಿ ಪ್ರಿಯರ ಭಾರಿ ಬೇಡಿಕೆಯೊಂದಿಗೆ ಪ್ಯಾನ್-ಇಂಡಿಯಾ ಚಲನಚಿತ್ರವಾದ ಮೊದಲ ಕನ್ನಡ ಚಿತ್ರವಾಗಿದೆ. ಇದರೊಂದಿಗೆ ಕಾಂತಾರ ಈಗಾಗಲೇ ಭಾರತದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂಪಾಯಿ ಗಳಿಸಿದೆ ಎನ್ನಲಾಗುತ್ತಿದೆ.
ಈ ಮಧ್ಯೆ ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಟ ರಿಷಬ್ ಶೆಟ್ಟಿ ಅವರೊಂದಿಗೆ 'ಕಾಂತಾರ' ಸಿನಿಮಾ ನೋಡುತ್ತಾರೆ ಎಂದು ಉಡುಪಿ ಸ್ಥಳೀಯ
ಮಾಧ್ಯಮವೊಂದು ವರದಿ ಮಾಡಿತ್ತು. ಈ ಬಗ್ಗೆ ಭಾರಿ ಚರ್ಚೆ ಕೂಡ ಆರಂಭವಾಗಿದೆ. ಈ ಎಲ್ಲ ಚರ್ಚೆಗೆ ಹೊಂಬಾಳೆ ಫಿಲಂಸ್ ಹಾಗೂ ನಟ ರಿಷಬ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಹೈದರಾಬಾದ್ನಿಂದ ಬೆಂಗಳೂರಿಗೆ ಬಂದಿಳಿದಿದ್ದೇನೆ. ಎಂದು ನಟ ರಿಷಬ್ ಶೆಟ್ಟಿ ತಿಳಿಸಿದ್ದಾರೆ. ಇನ್ನು ಇದೇ ವಿಚಾರಕ್ಕೆ ಹೊಂಬಾಳೆ ಫಿಲ್ಸ್ನ ಅಧಿಕೃತ ಮೂಲವು ವದಂತಿಗಳನ್ನು ನಿರಾಕರಿಸಿದೆ ಮತ್ತು ಇದು ಸುಳ್ಳು ಸುದ್ದಿ ಎಂದು ಕರೆದಿದೆ.
0 Comments