ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್ಐ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಭಾಷ್ ಶೆಣೈ(52) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೂಲತಃ ಬೆಳ್ಳಾರೆ ನಿವಾಸಿಯಾಗಿರುವ ಇವರು ಬಂಟ್ವಾಳ ಬಿ.ಸಿ. ರೋಡ್ ಬಳಿ ಮನೆ ಮಾಡಿ ವಾಸವಾಗಿದ್ದರು.
ಪೊಲೀಸ್ ಇಲಾಖೆಯಲ್ಲಿ ಕಾನ್ಟೇಬಲ್ ಅಗಿ ಕರ್ತವ್ಯ ಆರಂಭಿಸಿದ ಸುಭಾಷ್ ಶೆಣೈ ಮಂಗಳೂರು ಸಂಚಾರಿ ಠಾಣೆ, ಬಂಟ್ವಾಳ, ಪುಂಜಾಲಕಟ್ಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಹೆಡ್ ಕಾನ್ಟೇಬಲ್ ಅಗಿ ಬಡ್ತಿ ಹೊಂದಿದ್ದು ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಪ್ರಸ್ತುತ ಎಎಸ್ಐ ಅಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.
ಪ್ರತಿ ಕಡೆ ನಡೆಯುವಂತೆ ವೇಣೂರು ಪೊಲೀಸ್ ಠಾಣೆಯಲ್ಲಿಯೂ ಆಯುಧ ಪೂಜೆಯನ್ನು ಆಚರಿಸಿದ್ದು ಸುಭಾಷ್ ಶೆಣೈ ಕೂಡಾ ಸಹೋದ್ಯೋಗಿಗಳ ಜೊತೆ ಆಯುಧ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಅಲ್ಲಿಂದ ಮನೆಗೆ ತೆರಳಿದ ಅವರು ಮರುದಿನವೇ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅ.೧೫ ರಂದು ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಸುಭಾಷ್ ಶೆಣೈಯವರು ಪತ್ನಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದು, ಸಹೋದ್ಯೋಗಿಯನ್ನು ಕಳೆದುಕೊಂಡ ಪೊಲೀಸರು ಕಂಬನಿ ಮಿಡಿದಿದ್ದಾರೆ.
0 Comments