ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗರಗುಡ್ಡೆ ಪುನರೂರು ಬಳಿಯ ಗುಡ್ಡದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಶವ ಪತ್ತೆಯಾದ ಅಣತಿ ದೂರದಲ್ಲಿ ಸಿಕ್ಕಿದ ಚೀಲದಲ್ಲಿ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ಚೀಟಿ ಸಹಾಯದಿಂದ ವ್ಯಕ್ತಿಯ ಗುರುತು ಪತ್ತೆಯಾಗಿದ್ದು ಮೃತ ವ್ಯಕ್ತಿಯನ್ನು ವಿಠಲ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.
ಇಲ್ಲಿನ ಅಂಗಾರಗುಡ್ಡೆ ಪುನರೂರು ಸಮೀಪ
ಗುರುವಾರ ಸಂಜೆ ವೇಳೆಗೆ ಸ್ಥಳೀಯ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಪರಿಸರ ದುರ್ವಾಸನೆ ಬೀರುತ್ತಿದ್ದುದನ್ನು ಕಂಡು ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರ ಶವ ಕೊಳೆತು ನಾರುತ್ತಿದ್ದು, ಎಲುಬುಗಳು ಮಾತ್ರ ಪತ್ತೆಯಾಗಿದೆ.
ಮೃತ ವಿಠಲ್ ಶೆಟ್ಟಿಗಾರ್ ಅವರು ಅನಾರೋಗ್ಯಕ್ಕೆ ಚಿಕಿತ್ಸೆ ಪಡೆದಿದ್ದು, ಮಾನಸಿಕವಾಗಿ ನೊಂದು ಗುಡ್ಡದಲ್ಲಿ ಅತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 Comments