ಮೂಡುಬಿದಿರೆ : ಇಲ್ಲಿನ ಅರಮನೆ ಬಾಗಿಲಿನ ಬಳಿ ಇರುವ ಸ್ಪೂರ್ತಿ ಬಿನ್ನ ಸಾಮರ್ಥ್ಯದ ಮಕ್ಕಳ ಶಾಲೆ, ಪುತ್ತೂರು ವಿಭಾಗದ ಭಾರತೀಯ ಅಂಚೆ ಇಲಾಖೆ ಮತ್ತು ಡಿಜಿಟಲ್ ಸೇವಾ ಕೇಂದ್ರದ ವ್ಯವಸ್ಥೆಗಳಲ್ಲಿ ವಿಶೇಷ ಚೇತನರಿಗೆ ಹಾಗೂ ಪೋಷಕರಿಗೆ ಉಚಿತ ಆಧಾರ ನೋಂದಣಿ ಹಾಗೂ ತಿದ್ದುಪಡಿ, ಆಯುಷ್ಯ ಮತ್ತು ಅಭಾ ಕಾರ್ಡ್ ಅಭಿಯಾನ ಸ್ಫೂರ್ತಿ ಶಾಲೆಯಲ್ಲಿ ನಡೆಯಿತು.
ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಆಧಾರ್ ನೋಂದಣಿ ಮತ್ತು ತಿದ್ದುಪಡಿಗೆ ತನ್ನ ಶಾಲೆಯ ಮಕ್ಕಳಿಗೆ ಮತ್ತು ಪೋಷಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸಂಸ್ಥೆಯ ಮುಖ್ಯಸ್ಥರು ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ. ಜೊತೆಗೆ ಈ ಸಂಸ್ಥೆಯಲ್ಲಿ ಪ್ಲಾಸಿಕ್ ಬಳಕೆಯನ್ನು ಕಡಿತಗೊಳಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.
ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗದ ಕಾರ್ಯನಿರ್ವಣಾಧಿಕಾರಿ ಎಕ್ಸಿಕ್ಯೂಟಿವ್ ಗುರುಪ್ರಸಾದ್ ಅಂಚೆ ಇಲಾಖೆಯಲ್ಲಿ ಈಗ ಜನರಿಗೆ ಇರುವ ಯೋಜನೆಗಳು, ಡಿಜಿಟಲ್ ಸೇವಾ ಕೇಂದ್ರ ಸಿಸ್ ಟೆಕ್ಮುಖ್ಯಸ್ಥ ವರುಣ್ ಅಧಾರ್ ಕಾರ್ಡ್ನ ಬಗ್ಗೆ ಮಾಹಿತಿ ನೀಡಿದರು. ಶಾಲಾ ಪೋಷಕರ ಸಮಿತಿಯ ಅಧ್ಯಕ್ಷೆ ಲತಾ ಸುರೇಶ್, ಶಾಲೆಯ ಮುಖ್ಯಸ್ಥ ಪ್ರಕಾಶ್ ಜೆ.ಶೆಟ್ಟಿಗಾರ್ ಉಪಸ್ಥಿತರಿದ್ದರು. ಶಿಕ್ಷಕಿ ಸುಚಿತ್ರಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
0 Comments