ಹರ್ಷ ಕೊಲೆ ಕೇಸ್ ಆರೋಪಿಗೆ ಜಾಮೀನು

ಜಾಹೀರಾತು/Advertisment
ಜಾಹೀರಾತು/Advertisment

 


ಬೆಂಗಳೂರು : ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 

 ಹರ್ಷ ಕೊಲೆ ಪ್ರಕರಣದಲ್ಲಿ 10ನೇ ಆರೋಪಿ ಜಾಫರ್ ಸಾದಿಕ್ (52) ಎಂಬಾತನಿಗೆ ಎನ್ ಐಎ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ.

ಫೆ.24 ರಂದು ಸಾದಿಕ್ ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯು 50 ಸಾವಿರ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಶೂರಿಟಿ ನೀಡಬೇಕು. ನ್ಯಾಯಾಲಯ ವಿನಾಯಿತಿ ನೀಡದ ಹೊರತು, ಪ್ರತಿ ಬಾರಿ ಪ್ರಕರಣದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. 

ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ನಾಶ ಮಾಡಬಾರದು. ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗ ಬಾರದು ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.

Post a Comment

0 Comments