ನ. 13 ರಂದು ಕೆಸರ್ದ ಗೊಬ್ಬು-2022

ಜಾಹೀರಾತು/Advertisment
ಜಾಹೀರಾತು/Advertisment

 


ಮೂಡುಬಿದಿರೆ: ಇಲ್ಲಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮೂಡುಬಿದಿರೆ ಇದರ ಶ್ರೀ ನಾರಾಯಣಗುರು ಸೇವಾದಳ ಹಾಗೂ ಶ್ರೀ ನಾರಾಯಣಗುರು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ 3ನೇ ವರ್ಷದ ಕೆಸರ್ದ ಗೊಬ್ಬು-2023 ಕಾರ್ಯಕ್ರಮವು ದೊಡ್ಮನೆ ದಿ|ನಾರಾಯಣ ಪೂಜಾರಿಯವರ ತೋಟಮನೆ ಗದ್ದೆ, ಚಂದ್ರಶೇಖರ ದೇವಸ್ಥಾನದ ಬಳಿ ನಡೆಯಲಿದೆ.

ಕಾರ್ಯಕ್ರಮವನ್ನು ಕರ್ನಾಟಕ ಬೆಂಗಳೂರು ಉಚ್ಛ ನ್ಯಾಯಾಲಯದ ನಿರ್ದೇಶಿತ ಹಿರಿಯ ನ್ಯಾಯವಾದಿ ತಾರಾನಾಥ ಪೂಜಾರಿ ಇರುವೈಲು ಉದ್ಘಾಟಿಸಲಿದ್ದು,ಶ್ರೀ ನಾರಾಯಣಗುರು ಸೇವಾದಳದ ಅಧ್ಯಕ್ಷ ರಾಜ್ ಎಸ್ ಸನಿಲ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ, ದ.ಕ ಭಾ.ಜ.ಪಾ ಜಿಲ್ಲಾಧ್ಯಕ್ಷ  ಸುದರ್ಶನ್ ಎಂ, ಮಂಗಳೂರು ಬ್ರಿಗೇಡ್ ನ ಸದಾನಂದ ಪೂಜಾರಿ,ಮಂಗಳೂರು ಎಸ್.ಆರ್.ಆರ್ ನ ಶೈಲೇಂದ್ರ ಸುವರ್ಣ, ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಹಾಗೂ ವಕೀಲ ಸುರೇಶ್. ಕೆ ಪೂಜಾರಿ, ಪೊನ್ನೆಚ್ಚಾರಿ ಸುಬ್ಬಮಹಲ್ ನ ಭಾನುಮತಿ ಶೀನಪ್ಪ, ನಾರಾಯಣಗುರು ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಕೇಶವ ಭಾಗವಹಿಸಲಿದ್ದಾರೆ.

ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.

Post a Comment

0 Comments