ಬೆಂಗಳೂರಿನ ವಿಧಾನ ಸೌಧದ ಮೆಟ್ಟಿಲುಗಳಲ್ಲಿ ನಡೆದ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಕೊಡಲ್ಪಡುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗೈರಾಗಿದ್ದಾರೆ.
ಈ ಬಗ್ಗೆ ಮಧ್ಯಮಗಳು ಸಿದ್ದರಾಮಯ್ಯರನ್ನು ಪ್ರಶ್ನಿಸಿದಾಗ ನನ್ನ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಿದ್ದಾರೆ ಮತ್ತು ಆ ಆಮಂತ್ರಣ ಪತ್ರಿಕೆ ತಲುಪಿದೆ ಆದರೆ ಯಾರು ಕೂಡ ನನ್ನನ್ನು ಕರೆ ಮಾಡಿ ಆಹ್ವಾನಿಸಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾತ್ರವಲ್ಲದೆ ಸರ್ಕಾರ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುತ್ತಿರುವುದು ಸ್ವಾಗತಾರ್ಹ, ಆದರೆ ನಾನು ಈ ಕಾರ್ಯಕ್ರಮ ಕ್ಕೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.
0 Comments