ಮೂಡುಬಿದಿರೆ: ಜವಾಹರಲಾಲ್ ನೆಹರು ಪ್ರೌಢಶಾಲೆ ಮಕ್ಕಿ ಶಿರ್ತಾಡಿ ಇಲ್ಲಿ ನಡೆಯುತ್ತಿರುವ ಎಸ್.ಎನ್. ಮೂಡಬಿದ್ರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಎನ್ನೆಸ್ಸೆಸ್ ಶಿಬಿರವನ್ನು ಶ್ರೀ ಮಹಾವೀರ ಕಾಲೇಜು ವಿಶ್ವಸ್ಥ ಮಂಡಳಿಯ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಿದರು.
ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಕ್ರಿಯಾಶಕ್ತಿ ಇಮ್ಮಡಿಗೊಳಿಸಲು ರಾಷ್ಟ್ರೀಯ ಸೇವಾ ಯೋಜನೆ ಅತ್ಯುತ್ತಮ ಸಾಧನವಾಗಿದ್ದು ವಿದ್ಯಾರ್ಥಿ ಜೀವನದಿಂದಲೇ ಸೇವಾ ಮನೋಭಾವವನ್ನು ಬೆಳೆಸುವ ಕಾರ್ಯ ಎನ್ನೆಸ್ಸೆಸ್ ಶಿಬಿರಗಳಿಂದ ನಡೆಯುತ್ತಿದೆ ಎಂದರು.
ಜವಾಹರಲಾಲ್ ನೆಹರೂ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದ್ದರು.
ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್, ವಾಲ್ಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಜವಾಹರಲಾಲ್ ನೆಹರು ಪ್ರೌಢಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೌಶಿಕ್ ಕೆ. ಎಸ್., ವಿದ್ಯಾರ್ಥಿ ನಾಯಕರು, ಜವಾಹರಲಾಲ್ ನೆಹರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಘಟಕ 1ರ ಅಧಿಕಾರಿ ರಾಮ್ ಪ್ರಸಾದ್ ಎಂ.ಅತಿಥಿಗಳನ್ನು ಸ್ವಾಗತಿಸಿದರು. ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ಪ್ರಾಂಶುಪಾಲ ಜೆ.ಜೆ. ಪಿಂಟೋ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಘಟಕ 2ರ ಅಧಿಕಾರಿ ಗೋಪಾಲಕೃಷ್ಣ ಕೆ.ಎಸ್. ಶಿಬಿರಾರ್ಥಿಗಳಿಗೆ ಭೋಧಿಸಿದರು. ಶಿಬಿರಾರ್ಥಿ ಮಾನಸ ಕಾರ್ಯಕ್ರಮ ನಿರೂಪಿಸಿದರು. ಶಿಬಿರಾರ್ಥಿ ಕಲ್ಯಾಣಿ ವಂದಿಸಿದರು.
0 Comments