ಮಂಗಳೂರು ಪೊಲೀಸರ ಭರ್ಜರಿ ಭೇಟೆ:ಆಂದ್ರದ ಕಾರು,ವಸ್ತು ಸಹಿತ ಇಬ್ಬರು ಅರೆಸ್ಟ್

ಜಾಹೀರಾತು/Advertisment
ಜಾಹೀರಾತು/Advertisment

 


ದಿನಾಂಕ: 17-11-2022 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ 132kg ಗಾಂಜಾವನ್ನು ಸಾಗಾಟ ಮಾಡುತ್ತಿದ್ದ  ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮೂಲತಃ ದಕ್ಷಿಣ ಕನ್ನಡ ಹಾಗೂ ಕೇರಳದವರಾಗಿದ್ದಾರೆ. ಆಂದ್ರ ಪ್ರದೇಶದ ನಂಬರ್ ಇರುವ ಮಹೀಂದ್ರ xuv ಕಾರನ್ನು ಬಳಸಿ ಗಾಂಜಾ ಸಾಗಿಸುತ್ತಿದ್ದರು.

1.ರಮೀಝ್ ರಾಝ್, ಪ್ರಾಯ(30), ವಾಸ:ಡೋರ್ ನಂಬ್ರ: 2-392, ತೌಡುಗೋಳಿ ಕ್ರಾಸ್, ನರಿಂಗಾನ ಗ್ರಾಮ, ಬಂಟ್ವಾಳ ತಾಲೂಕು.

2. ಅಬ್ದುಲ್ ಖಾದರ್ ಹ್ಯಾರಿಸ್, ಪ್ರಾಯ(31), ವಾಸ: ಜೀಲಾನಿ ಮಂಝಿಲ್, ಮದಂಗಲ್ ಕಟ್ಟ, ಮೀಯಪದವು, ಮಂಜೇಶ್ವರ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ.

ಈ ಇಬ್ಬರನ್ನು ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಪತ್ತೆ ಹಚ್ಚಿ ಆರೋಪಿಗಳ ವಶದಲ್ಲಿದ್ದ ಬಿಳಿ ಬಣ್ಣದ ಮಹೇಂದ್ರ XUV 500   ಕಾರು ನಂಬ್ರ: ಕೆಎಲ್-14-ಪಿ-7775 ನೇದನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 132 ಕೆಜಿ ಗಾಂಜಾವನ್ನು, 2 ಮೊಬೈಲ್ ಫೋನ್ ಗಳನ್ನು, 3 ತಲವಾರುಗಳನ್ನು, ನಗದು ರೂ. 2180/- ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೇಂದ್ರ XUV 500 ಕಾರು,  ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 39,15,000/- ಆಗಿರುತ್ತದೆ. ಆರೋಪಿಗಳು ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ, ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿದ್ದರು.  ಈ ಬಗ್ಗೆ  ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ, ಹೀಗೆ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು  ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು  6 ಪ್ರಕರಣಗಳು ದಾಖಲಾಗಿರುತ್ತದೆ.

ಇನ್ನೋರ್ವ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ಎಂಬಾತನ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ.

ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ, ಎಎಸ್ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು ಎಂದು ಪೊಲಿಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Post a Comment

0 Comments