ಮೃತ ಪ್ರವೀಣ್ ನೆಟ್ಟಾರ್ ಮನೆಗೆ ಭೂಮಿ ಪೂಜೆ ನೆರವೇರಿಸಿದ ಬಿಜೆಪಿ ರಾಜ್ಯಾಧ್ಯಕ್ಷ,ಸಚಿವರು: ಶೀಘ್ರ ಮುಗಿಯುತ್ತಂತೆ ಕಾಮಗಾರಿ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ


ಪ್ರವೀಣ್ ನೆಟ್ಟಾರ್ ಅವರ ಕುಟುಂಬಕ್ಕೆ ಮನೆ ನಿರ್ಮಾಣ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿದ್ದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಭೂಮಿ ಪೂಜೆ ನೆರವೇರಿಸಿದರು. ಈ ಹಿಂದೆ ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ರಾಜ್ಯಾಧ್ಯಕ್ಷರು ಭರವಸೆ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ಭೂಮಿ ಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ಮುಂದಿನ ಮೇ ತಿಂಗಳ ಒಳಗಾಗಿ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಬಗ್ಗೆ ಗುತ್ತಿಗೆದಾರರಿಗೆ ಸೂಚಿಸಿದರು.


ಈ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕರಾದ ಸಂಜೀವ ಮಠಂದೂರು ಹಾಗೂ ಇತರೆ ಬಿಜೆಪಿ ನಾಯಕರು ಹಿಂದೂ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. 

Post a Comment

0 Comments

Advertisement