ರಾಷ್ಟ್ರಪತಿ ಪದಕ ಸ್ವೀಕಾರ

ಜಾಹೀರಾತು/Advertisment
ಜಾಹೀರಾತು/Advertisment

 


ಮೂಡುಬಿದಿರೆ: ಇಲ್ಲಿನ ಅಗ್ನಿಶಾಮಕ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗೀಶ್ ಪಿ.ಬಂಗೇರಾ ಅವರು 2021ನೇ ಸಾಲಿನ ರಾಷ್ಟ್ರಪತಿ ಶ್ಲಾಘನೀಯ ಸೇವಾ  ಪದಕವನ್ನು ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಇತ್ತೀಚೆಗೆ ಸ್ವೀಕರಿಸಿದರು.

 1993ರಲ್ಲಿ ಅಗ್ನಿಶಾಮಕರಾಗಿ ಇಲಾಖೆಗೆ ಸೇರ್ಪಡೆಗೊಂಡ ಅವರು 27 ವರ್ಷಗಳ  ಸೇವಾ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಪದೋನ್ನತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಸೇವಾ ಅವಧಿಯಲ್ಲಿ ಅನೇಕ ತೀವೃ ಅಗ್ನಿ ಕರೆಗಳು, ರಕ್ಷಣಾ ಕಡೆಗಳಲ್ಲಿ ಭಾಗವಹಿಸಿ ಸಾರ್ವಜನಿಕರ ಪ್ರಾಣ ರಕ್ಷಣೆ ಮತ್ತು ಆಸ್ತಿ-ಪಾಸ್ತಿ ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

   ನಿಸ್ವಾರ್ಥ ಸೇವೆಯ ಗೌರವಾರ್ಥವಾಗಿ ಇವರು ಇಲಾಖೆಯಲ್ಲಿ 17 ಬಾರಿ ನಗದು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ವಯೋಮಿತಿಯ ಮೇಲೆ ಇತ್ತೀಚೆಗೆ  ಸೇವೆಯಲ್ಲಿ ನಿವೃತ್ತಿ ಹೊಂದಿರುತ್ತಾರೆ.

Post a Comment

0 Comments