ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್‌ಗೆ ಜೀವಬೆದರಿಕೆ

ಜಾಹೀರಾತು/Advertisment
ಜಾಹೀರಾತು/Advertisment

  


ಪುತ್ತೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ ಜೀವ ಬೆದರಿಕೆಯೊಡ್ಡಿದ ಪುತ್ತೂರಿನ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಅನುಮತಿ ನೀಡಿದೆ.

ಪ್ರಮೋದ್‌ ಮುತಾಲಿಕ್‌ ಅವರು ತನಗೆ ಮೊಬೈಲ್‌ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ ವ್ಯಕ್ತಿಯ ವಿರುದ್ಧ ಧಾರವಾಡ ಉಪನಗರ ಠಾಣೆಗೆ ದೂರು ನೀಡಿದ್ದರು.

ಈ ವ್ಯಕ್ತಿಯ ಪತ್ತೆಗೆ ಕೋರ್ಟ್‌ ಅನುಮತಿ ಬೇಕಾಗಿದ್ದರಿಂದ ನ್ಯಾಯಾಲಯದ ಅನುಮತಿ ಪಡೆದಿರುವ ಪ್ರಮೋದ್‌ ಮುತಾಲಿಕ್‌ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಶೀಘ್ರವಾಗಿ ಪತ್ತೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಬೆದರಿಕೆಯೊಡ್ಡಿದ ಆ ವ್ಯಕ್ತಿ ಪುತ್ತೂರಿನ ಆಸಿಫ್ ಎಂದು ತಿಳಿದು ಬಂದಿದ್ದು, ಈಗಾಗಲೇ ನ್ಯಾಯಾಲಯದಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಅನುಮತಿ ನೀಡಿದೆ. ಪೊಲೀಸರು ಆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ.

Post a Comment

0 Comments