ಜೈನಕಾಶಿ ಮೂಡಬಿದಿರೆ :
ಜೈನ ಧರ್ಮದ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಹೊರಟಿರುವ ಜಾರ್ಖಂಡ್ ಸರಕಾರದ ಆದೇಶವನ್ನು ಹಿಂಪಡೆಯುವಂತೆ ಮೂಡುಬಿದಿರೆ ಜೈನ ಮಠದ ಪರಮ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಮೂಡುಬಿದಿರೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜೈನ ಧರ್ಮ ದ ಸಂಘ ಸಂಸ್ಥೆಗಳಾದ *ಜೈನ್ ಮಿಲನ್*, *ಮಹಾವೀರ ಸಂಘ*, *ಸರ್ವ ಮಂಗಳ ಜೈನ ಮಹಿಳಾ ಸಂಘ* *ತೌಳವ ಇಂದ್ರ ಸಮಾಜ*, *ತ್ರಿಭುವನ್ ಯೂತ್ ಫ್ರೆಂಡ* , *ಬಸದಿಗಳ ಸ್ವಚ್ಛತಾ ತಂಡ* ಗಳ ಅಧ್ಯಕ್ಷರು ಗಳು , ಕಾರ್ಯದರ್ಶಿಗಳು , ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಮೂಡುಬಿದ್ರೆಯ ತಹಶೀಲ್ದಾರರ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ, ಸನ್ಮಾನ್ಯ ಪ್ರಧಾನ ಮಂತ್ರಿಗಳಿಗೆ, ಸನ್ಮಾನ್ಯ ಗೃಹ ಮಂತ್ರಿಗಳಿಗೆ, ಜಾರ್ಖಂಡ್ ಸರಕಾರದ ಮುಖ್ಯಮಂತ್ರಿಗಳಿಗೆ, ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಗೆ ಮನವಿಪತ್ರಗಳನ್ನು ಸಲ್ಲಿಸಿದರು.
0 Comments