ವ್ಯಕ್ತಿಯಲ್ಲಿ ಅಂತರ್ಗತ ಶಕ್ತಿಯನ್ನು ಹೊರತರುವುದೇ ಶಿಕ್ಷಣ -ಬಿ ಸಿ ನಾಗೇಶ್ ಕುಮಾರ್

ಜಾಹೀರಾತು/Advertisment
ಜಾಹೀರಾತು/Advertisment

 

 ಮೂಡುಬಿದಿರೆ: ಮೂಡುಬಿದಿರೆಯ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಗಾಧವಾದ ಶಕ್ತಿಯಿರುತ್ತದೆ. ವ್ಯಕ್ತಿಯಲ್ಲಿ ಅಂತರ್ಗತವಾಗಿರುವ ಶಕ್ತಿಯನ್ನು ಹೊರತರುವುದೇ ಶಿಕ್ಷಣದ ಉದ್ದೇಶ. ನಮ್ಮ ದೇಶ ಯಶಸ್ವಿಯಾಗಿ ಕೊರೋನಾವನ್ನು ಎದುರಿಸಿದೆ. ಇಡೀ ಪ್ರಪಂಚದಲ್ಲಿ ಬೇರೆ ರಾಷ್ಟ್ರಗಳಿಗೆ ಮಾರ್ಗದರ್ಶನ ನೀಡಿ ಶಕ್ತರನ್ನಾಗಿಸುವ ಶಕ್ತಿ ಇದ್ದರೆ ಅದು ಭಾರತಕ್ಕೆ ಮಾತ್ರ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.

ಅವರು ಎಕ್ಸಲೆಂಟ್ ಸಮೂಹ ಸಂಸ್ಥೆಗಳ ದಶಮ ಸಂಭ್ರಮಾಚರಣೆಯ ಸಂಭ್ರಮದಲ್ಲಿ  ರಾತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. 

ಕೇವಲ ಒಂದು ಮಗುವನ್ನು ಬೆಳೆಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಯಾವುದೇ ಗುಣಮಟ್ಟಕ್ಕೆ ಕೊರತೆಯಾಗದಂತೆ ಎಕ್ಸಲೆಂಟ್ ವಿದ್ಯಾಸಂಸ್ಥೆ ಈ ಹತ್ತು ವರ್ಷದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಿದೆ. ಭಾರತೀಯ ಸಂಸ್ಕೃತಿಯಾದ ಯೋಗ, ಧ್ಯಾನ, ಪ್ರಾರ್ಥನ ಮುಂತಾದ ಚಟುವಟಿಕೆಗಳನ್ನು ಸಂಸ್ಥೆಯು ನಡೆಸುತ್ತಾ ನಿಜವಾದ ಅರ್ಥದಲ್ಲಿ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರವನ್ನು ನೀಡುವುದರ ಮೂಲಕ ಭವಿಷ್ಯಕ್ಕೆ ಭರವಸೆಯನ್ನು ನೀಡಿದೆ ಎಂದರು.

 ಶಾಸಕ ಉಮಾಥ ಕೋಟ್ಯಾನ್ ಮಾತನಾಡಿ ಶಿಕ್ಷಣ ಸಚಿವರಿಂದ ಸನ್ಮಾನಕ್ಕೊಳಪಟ್ಟ ವಿದ್ಯಾರ್ಥಿಗಳಿಗೆ ಇದು ಬಹಳ ಮಹತ್ವದ ದಿನ, ತಮ್ಮ ಕ್ಷೇತ್ರದ ಬಡ ಜನರಿಗೆ ಅನುಕೂಲವಾಗುವಂತೆ ಒಂದು ಸರಕಾರಿ ಪದವಿಪೂರ್ವ ಮತ್ತು ಪದವಿ ಕಾಲೇಜು ಆರಂಭಿಸಲು ಸಹಕರಿಸಿದ ಶಿಕ್ಷಣ ಸಚಿವರಿಗೆ ಕೃತಜ್ಞತೆ ತಿಳಿಸುತ್ತಾ ಅವರ ಸರಳ ಜೀವನವೇ ಇತರರಿಗೆ ಮಾದರಿ ಎಂದರು.

ನೀಟ್ ಪರೀಕ್ಷೆಯ ಮೂಲಕ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಪಡೆದಎ ಎಫ್ ಎಂ ಸಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದ ರಾಜೇಶ್ ಪರಾವತ್ ಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಐವತ್ತು ಸಾವಿರ ರೂಪಾಯಿಗಳ ನಗದು ಬಹುಮಾನ ವಿತರಿಸಲಾಯಿತು. 

ಹಾಗೆಯೇ ನೀಟ್ ಪರೀಕ್ಷೆಯ ಮೂಲಕ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಲ್ಲಿ ಮೆರಿಟ್ ಮೂಲಕ ಸೀಟು ಪಡೆದುಕೊಂಡ ಹನ್ನೊಂದು ವಿದ್ಯಾರ್ಥಿಗಳನ್ನೂ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಸಚಿವ ಬಿ ಸಿ ನಾಗೇಶ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಮೂಡುಬಿದಿರೆಯ ಹಿರಿಯ ವಕೀಲ ಬಾಹುಬಲಿ ಪ್ರಸಾದ್ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರು ಯುವರಾಜ ಜೈನ್, ಪಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ಶಿವಪ್ರಸಾದ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಸ್ವಾಗತಿಸಿದರು. ಉಪನ್ಯಾಸಕ ರಂಜಿತ್‌ ಜೈನ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Post a Comment

1 Comments

  1. ನೇರ ಸಂಸ್ಥೆಯವರು ಕಳಿಸಿದ ವರದಿಯ ತದ್ರೂಪಿ ಇದ್ದ ಹಾಗಿದೆ....

    ReplyDelete