ಉದ್ಯೋಗ ಖಾತರಿ ಯೋಜನೆ ವತಿಯಿಂದ 74ನೇ ಗಣರಾಜ್ಯೋತ್ಸವ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಉದ್ಯೋಗ ಖಾತರಿ ಯೋಜನೆ ವತಿಯಿಂದ 74ನೇ ಗಣರಾಜ್ಯೋತ್ಸವ  ಆಚರಣೆ



74 ನೇ ಗಣರಾಜ್ಯೋತ್ಸವದ ಅಂಗವಾಗಿ    ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಯೋಜನೆಯಡಿ ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ನ ಎಂದ್ರಟ್ಟ ಕೆರೆಯ ದಂಡೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.


ಬಳಿಕ ಮನರೇಗಾ ಯೋಜನೆಯಡಿ 100 ದಿನಗಳನ್ನು ಪೂರ್ಣಗೊಳಿಸಿದ ಫಲಾನುಭವಿಗಳಿಗೆ ಟಿ-ಶರ್ಟ್ ಮತ್ತು ಕ್ಯಾಪ್ ಸಾಂಕೇತಿಕವಾಗಿ ನೀಡಲಾಯಿತು. 


ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಶ್ರೀಧರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರಮೇಶ್ ರಾಥೋಡ್, ಪಂಚಾಯತ್ ಕಾರ್ಯದರ್ಶಿ ಶೇಖರ್, ತಾಲೂಕು ಐಇಸಿ ಸಂಯೋಜಕರು ಅನ್ವಯ, ಪಂಚಾಯತ್ ಸಿಬ್ಬಂದಿಗಳಾದ ಮಂಜುಶ್ರೀ, ಪ್ರಿಯಾ,ಸಂದೀಪ್ , ವಸಂತ್,  ಸೌಮ್ಯ ಹಾಗೂ ಗ್ರಾಮಸ್ಥರು‌ ಉಪಸ್ಥಿತರಿದ್ದರು.

Post a Comment

0 Comments