ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ "ಬೂತ್ ವಿಜಯ ಅಭಿಯಾನ" ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು.
ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 79 ರ 5 ಮನೆಗಳಿಗೆ ತೆರಳಿ ಪಕ್ಷದ ಧ್ವಜ ಹಸ್ತಾಂತರ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮಂಡಲಾಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಕೃಷ್ಣರಾಜ ಹೆಗ್ಡೆ ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಈ ಸಂದರ್ಭದಲ್ಲಿದ್ದರು.
0 Comments