ಕರಾವಳಿ ಕೇಸರಿ ಸೇವಾ ಟ್ರಸ್ಟ್ ರಿ . ಬೆದ್ರ ಇದರ ನೇತೃತ್ವದಲ್ಲಿ ಜ. 28ರಂದು ದರೆಗುಡ್ಡೆ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯುವ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಸಭೆಯ ಆಮಂತ್ರಣ ಪತ್ರವನ್ನು ಕೆಲ್ಲಪುತ್ತಿಗೆ ಭೂತರಾಜಗುಡ್ಡೆಯಲ್ಲಿ ಕ್ಷೇತ್ರದ ಮೊಕ್ತೇಸರ ಕೆ.ಪಿ. ಜಗದೀಶ ಅಧಿಕಾರಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಮಿತ್ರಾಜ್ ದರೆಗುಡ್ಡೆ, ಗೌರವಾಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಅಧ್ಯಕ್ಷ ಸಂದೀಪ್ ಸುವರ್ಣ ಕೆಲ್ಲಪುತ್ತಿಗೆ, ಜತೆ ಕಾರ್ಯದರ್ಶಿ ಪ್ರದೀಪ್ ಕೋಟ್ಯಾನ್, ಸತೀಶ್ ಸುವರ್ಣ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 Comments