ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ನಿರಂತರ ಬೇಡಿಕೆಗೆ ಕೊನೆಗೂ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಅತ್ಯಂತ ಕ್ಲಿಷ್ಟಕರವಾದ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ವಿಭಾಗದ ಮಾರನಹಳ್ಳಿ ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು ರೂ. 1976 ಕೋಟಿ ಮೊತ್ತದ ಬಿಡ್ ನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಮನವಿಗೆ ಉತ್ತರಿಸಿ ಪತ್ರ ಬರೆದು ಉತ್ತರಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.
ಈ ಚತುಷ್ಪಥ ಕಾಮಗಾರಿ ಒಟ್ಟಿಗೆ ಮಂಗಳೂರು- ಬೆಂಗಳೂರು ನಡುವಿನ ಸಂಚಾರಕ್ಕೆ ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡಲಿರುವ ಶಿರಾಡಿ ಘಾಟ್ ಟನಲ್ ಯೋಜನೆಯನ್ನು ರೂ. 15,000 ಕೋಟಿ ವೆಚ್ಚದಲ್ಲಿ 23 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಏಪ್ರಿಲ್, 2023 ರೊಳಗೆ ಡಿಪಿಆರ್ ಅನ್ನು ಅಂತಿಮಗೊಳಿಸಿ ಮತ್ತು ಮೇ, 2023 ರಲ್ಲಿ ಬಿಡ್ ಗಳನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ.
ಅಲ್ಲದೆ ಸಕಲೇಶಪುರದಿಂದ ಮಾರನಹಳ್ಳಿಯ ಭಾಗದ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಕೂಡಲೆ ದುರಸ್ತಿ ಮಾಡಲು ನಿರ್ಧರಿಸಲಾಗಿದ್ದು, .ದುರಸ್ತಿ ಕಾಮಗಾರಿಗೆ ರೂ. 12.20 ಕೋಟಿ ಬಿಡ್ ನ ಮೌಲ್ಯಮಾಪನ ಮಾಡಲಾಗುತ್ತಿದೆ. ಅಲ್ಲದೆ, ಅಸ್ತಿತ್ವದಲ್ಲಿರುವ ರಸ್ತೆ ನಿರ್ವಹಣೆಗೆ ಗುತ್ತಿಗೆದಾರರು ಪ್ಯಾಚ್ ವರ್ಕ್ ದುರಸ್ತಿಗೆ ಮುಂದಾಗಿದ್ದಾರೆ ಎಂದು ಗಡ್ಕರಿಯವರು ಶ್ರೀ ನಳಿನ್ ಕುಮಾರ್ ಕಟೀಲ್ ಇವರಿಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
0 Comments