ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ವೀರ ಕಂಬಳ' ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಬಣ್ಣ ಹಚ್ಚುತ್ತಿದ್ದಾರೆ.
ಹೌದು ಈ ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ ಧರ್ಮಾಧಿಕಾರಿಗಳು ಬಣ್ಣ ಹಚ್ಚಿದ್ದಾರೆ. ಇನ್ನು ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿದ್ದು ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಚಿತ್ರದ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಒಂದು ಪಾತ್ರ ಮಾಡಿದ್ದಾರೆ. ಪ್ರಕಾಶ್ ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ.
ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ವೀರೇಂದ್ರ ಹೆಗ್ಗಡೆ ಅವರು ಪಾಲ್ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರಿಗೆ ಮೇಕಪ್ ಹಚ್ಚುತ್ತಿರುವ ಫೋಟೋಗಳನ್ನು ಹಲವರು ಹಂಚಿಕೊಂಡಿದ್ದಾರೆ.
0 Comments