ಲಾಡಿ ಚತುರ್ಮುಖ ಬ್ರಹ್ಮ ದೇವಸ್ಥಾನ ನೂತನ ಗರ್ಭಗುಡಿಗೆ ಶಿಲಾನ್ಯಾಸ

ಜಾಹೀರಾತು/Advertisment
ಜಾಹೀರಾತು/Advertisment

 ಲಾಡಿ ಚತುರ್ಮುಖ ಬ್ರಹ್ಮ ದೇವಸ್ಥಾನ ನೂತನ ಗರ್ಭಗುಡಿಗೆ ಶಿಲಾನ್ಯಾಸ






ಮೂಡುಬಿದಿರೆ : ಪ್ರಾಂತ್ಯ ಗ್ರಾಮದ ಲಾಡಿಯಲ್ಲಿರುವ ಸುಮಾರು 1300 ವರ್ಷಗಳಷ್ಟು ಹಳೆಯ ಶಿಥಿಲಗೊಂಡಿರುವ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನ (ನಾಗಬ್ರಹ್ಮಸ್ಥಾನ)ವನ್ನು ಸುಮಾರು 4.64ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಿಸಲಾಗುತ್ತಿದ್ದು ನೂತನ ಗರ್ಭಗುಡಿಗೆ ಜನವರಿ.26ರಂದು ಬೆಳಿಗ್ಗೆ ಗಂಟೆ 9.45ಕ್ಕೆ ಶಿಲಾನ್ಯಾಸ ನಡೆಯಲಿದೆ.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಕೆ. ರಾವ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅನಂತಕೃಷ್ಣರಾವ್ ಅಧ್ಯಕ್ಷತೆ ವಹಿಸಲಾಗಿದ್ದು ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ ಎ. ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಟಿ.ಜಿ. ಗುರುಪ್ರಸಾದ್, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಹೊಸಂಗಡಿ ಅರಮನೆಯ ಸುಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ. ಶಿಲಾಮಯ ಗರ್ಭಗುಡಿ, ತೀರ್ಥ ಮಂಟಪ, ಸುತ್ತು ಪೌಳಿ, ನಾಡುವಿನ ಗುಡಿ, ರಕ್ತೇಶ್ವರೀ ಮಾಡ, ಕೊಡಮಣಿತ್ತಾಯ ಮಾಡ, ಗಣಪತಿ ಗುಡಿ, ನಾಗಬನದ ಜೀರ್ಣೋದ್ಧಾರ, ದೇವಳದ ಕೆರೆ ನಿರ್ಮಾಣ, ಗೋಪುರ, ಬಾವಿ ಹಾಗೂ ಸ್ನಾನದ ಕೊಠಡಿ, ಕುದುರೆಗುಂಡಿ ನವೀಕರಣ ಮತ್ತಿತರ ಕಾಮಗಾರಿಗಳು ಹಂತಹಂತವಾಗಿ ನಡೆಲಿದೆ ಎಂದು ಅವರು ತಿಳಿಸಿದರು. ವಾಸ್ತು ಶಿಲ್ಪಿ ಪ್ರಸಾದ್ ಮುನಿಯಂಗಳ, ಶಿಲ್ಪಿ ಪದ್ಮನಾಭ, ಸಮಿತಿಯ ಉಪಾಧ್ಯಕ್ಷ ಗಣೇಶ್‌ರಾವ್, ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಸದಾನಂದ ಪೂಜಾರಿ, ಸದಸ್ಯರಾದ ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments