ಪುತ್ತಿಗೆ ಪದವಿನಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ
ಮೂಡುಬಿದಿರೆ ವಾಲಿಬಾಲ್ ಅಸೋಸಿಯೇಷನ್ (ರಿ) ಮತ್ತು ಮಣಿಕಂಠ ಫ್ರೆಂಡ್ಸ್ ಒಂಟಿಕಟ್ಟೆ ಇವುಗಳ ಜಂಟಿ ಆಶ್ರಯದಲ್ಲಿ ಪುತ್ತಿಗೆ ಪದವಿನಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು.
ಮೂಡುಬಿದಿರೆ ವಾಲಿಬಾಲ್ ಅಸೋಸಿಯೇಷನ್ ನ ಅಧ್ಯಕ್ಷ, ಆಳ್ವಾಸ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವಿನಯ್ ಆಳ್ವ, ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಪೂಜಾರಿ, ಪ್ರಮುಖರಾದ ಸೇವಂತಿ ಶ್ರೀಯಾನ್, ಬೋಳ ವಿಶ್ವನಾಥ್ ಕಾಮತ್, ಸಘಟಕ ದೀಪಕ್ ಶೆಟ್ಟಿ, ಕಾರ್ಯದರ್ಶಿ, ಪದಾಧಿಕಾರಿಗಳು, ಕ್ರೀಡಾಪಟುಗಳು, ಹಾಗೂ ಕ್ರೀಡಾಭಿಮಾನಿಗಳು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 Comments