ಮಂಗಳೂರು ವಿಶ್ವವಿದ್ಯಾನಿಲಯ ಬನ್ನಡ್ಕ ಕಾಲೇಜು ನಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಗಾರ
ಮಾರಾಟ ಇಲ್ಲದೆ ವ್ಯಾಪಾರವಿಲ್ಲ. ಮಾರ್ಕೆಟಿಂಗ್ ಇಲ್ಲದೆ ಯಾವುದೇ ಮಾರಾಟವಿಲ್ಲ ಎಂದು ಉಡುಪಿ ತ್ರಿಶಾ ವಿದ್ಯಾ ಕಾಲೇಜಿನ ಉಪನ್ಯಾಸಕರಾದ ಆಲ್ಬನ್ ಆ್ಯಂಟನಿ ಪಿರೇರಾ ಅಭಿಪ್ರಾಯಪಟ್ಟರು.
ಇವರು ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ ಇದರ ಕಂಪ್ಯೂಟರ್ ಸಾಯಿನ್ಸ್ ವಿಭಾಗದ ವತಿಯಿಂದ ಬಿ.ಎ., ಬಿ.ಸಿ.ಎ. ಹಾಗೂ ಬಿ.ಕಾಂ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಡಿಜಿಟಲ್ ಮಾರ್ಕೆಟಿಂಗ್ ಉಪನ್ಯಾಸ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು. ಡಿಜಿಟಲ್ ಮಾರ್ಕೆಟಿಂಗ್ ಎಂದರೇನು? ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಮಾಧ್ಯಮಗಳ ನಡುವೆ ಬದುಕುತ್ತಿರುವ ನಮಗೆ ಡಿಜಿಟಲ್ ಮಾರ್ಕೆಟಿಂಗ್ ಯಾಕೆ ಬೇಕು? ಎಷ್ಟು ಸುಲಭವಾಗಿ ಡಿಜಿಟಲ್ ಮಾರ್ಕೆಟಿಂಗ್ ಮಾಡಬಹುದು ಮತ್ತು ಈ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಉತ್ತಮ ಉದಾಹರಣೆ ಮತ್ತು ಪ್ರಾತ್ಯಕ್ಷಿತೆಗಳೊಂದಿಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾಲೇಜಿನ ಸಂಯೋಜಕರಾದ ಪ್ರೊ. ಗಣಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿವಿಧ ವಿಭಾಗಗಳು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ವೃತ್ತಿ ಜೀವನಕ್ಕೆ ಪೂರಕವಾಗುವಂತಹ ಅನೇಕ ಕಾರ್ಯಗಾರಗಳನ್ನು ಹಮ್ಮಿಕೊಳ್ಳುತ್ತಿವೆ. ವಿದ್ಯಾರ್ಥಿಗಳು ಅವುಗಳ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕು ಎಂದರು.
ವಿಧ್ಯಾರ್ಥಿಕ್ಷೇಮಪಾಲನ ಅಧಿಕಾರಿ ಶಶಿಕಲಾ ಎನ್, ಕಾರ್ಯಕ್ರಮದ ಅಯೋಜಕರಾದ ಕಂಪ್ಯೂಟರ್ ಸಾಯಿನ್ಸ್ ವಿಭಾಗದ ಉಪನ್ಯಾಸಕರಾದ ಆಶಾ ಶಾಲೆಟ್ ಡಿಸೋಜಾ, ರವಿರಾಜ್ ಬಿ,ಜಿ,, ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಸುಕನ್ಯಾ ಸ್ವಾಗತಿಸಿದರು. ಸುರಕ್ಷಾ ವಂದಿಸಿದರು. ಹೃತಿಕಾ ಕಾರ್ಯಕ್ರಮ ನಿರೂಪಿಸಿದರು.
0 Comments