ಕಲೆ ಕೌಶಲ್ಯವನ್ನು ಮೀರಿದ್ದು- ಕಾಂತಾರ ನಟಿ ಮಾನಸಿ ಸುಧೀರ್ ಅಭಿಮತ,
ಮೂಡುಬಿದಿರೆ : ಎಲ್ಲಾ ಕಲಾವಿದರ ಆರಾಧ್ಯ ದೈವ ಶಿವ. ಸತತ ಪ್ರಯತ್ನದಿಂದ ಕೌಶಲ್ಯ ಬರುತ್ತದೆ. ಕಲೆ ಕೌಶಲ್ಯವನ್ನು ಮೀರಿದ್ದು ಕಲಾ ಆರಾಧಕರಾಗಿ ಕಲೆಯನ್ನು ಪ್ರೀತಿಸಿದಾಗ ಮಾನಸಿಕ ನೆಮ್ಮದಿಯ ಜೊತೆಗೆ ಸಾಧಕರಾಗಲು ಸಾಧ್ಯವಾಗುತ್ತದೆ ಎಂದು ಅಂತರಾಷ್ಟ್ರೀಯ ಖ್ಯಾತಿ ಪಡೆದ ಕಾಂತಾರದ ಕಮಲಕ್ಕ ಖ್ಯಾತಿಯ ಮಾನಸಿ ಸುಧೀರ್ ಹೇಳಿದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ನಡೆದ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಎಕ್ಸಲೆಂಟ್ ವಿದ್ಯಾಸಂಸ್ಥೆ ಧನಾತ್ಮಕ ಚಿಂತನೆ ಹೊಂದಿದೆ. ಈ ಚಿಂತನೆಯಡಿಯಲ್ಲಿ ಪ್ರತಿಭಾವಂತ ಗುರುಗಳನ್ನು ಹೊಂದಿದೆ. ಅವರ ಮಾರ್ಗದರ್ಶನದಲ್ಲಿ ಉತ್ತಮ ಸಾಧನೆ ಮಾಡಬೇಕು. ತಂತ್ರಜ್ಞಾನಕ್ಕೂ ಮೀರಿದ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ ಕಲಾ ಚಟುವಟಿಕೆಗಳನ್ನು ಪ್ರೀತಿಯಿಂದ ಆಶ್ವಾದಿಸಿ ವಿದ್ಯಾರ್ಥಿಗಳನ್ನು ಕಲೆಯಲ್ಲಿ ಮಾಸ್ ಮಾಡುವುದು ನಮ್ಮ ಕನಸಾಗಿದೆ ಎಂದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕಲೆ ಮನುಷ್ಯನನ್ನ ಸಂತೋಷವಾಗಿಡುತ್ತದೆ. ಪ್ರತಿದಿನ ತಮ್ಮ ಕಲೆಯ ಮೂಲಕ ಸಂತೋಷವನ್ನು ಉಣಬಡಿಸುತ್ತಿರುವ ನಟಿ ಮಾನಸಿ ಸುಧೀರ್ ಇವರಿಗೆ “ಅಭಿನಯ ಶಂಕರಿ” ಎಂಬ ಬಿರುದು ನೀಡಿ ಗೌರವಿಸುವುದು ನಮಗೆ ಹೆಮ್ಮೆಯೆನಿಸುತ್ತದೆ ಎಂದರು.
ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಸಂಪತ್ ಕುಮಾರ್ ಪ್ರಾಂಶುಪಾಲ ಪ್ರದೀಪ್ ಕುಮಾರ್ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಸಹ ಮುಖ್ಯೋಪಾಧ್ಯಾಯ ಜಯಶೀಲ, ಸೆಂಟ್ರಲ್ ಶಾಲೆಯ ಉಪ ಪ್ರಾಂಶುಪಾಲೆ ವಿಮಲಾ ಹಾಗೂ ಎಲ್ಲಾ ಚಟುವಟಿಕೆಯ ಶಿಕ್ಷಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಟಿ ಮಾನಸಿ ಸುಧೀರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಉಪನ್ಯಾಸಕ ಡಾ. ವಾದಿರಾಜ ಕಲ್ಲೂರಾಯ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಮೌಲ್ಯ ಸ್ವಾಗತಿಸಿದರು. ಶ್ಯಾಮಿಲಿ ಹೆಗ್ಡೆ ವಂದಿಸಿದರು. ವಿದ್ಯಾರ್ಥಿ ಸಂಜಿತ್ ನಿರೂಪಿಸಿದರು.
0 Comments