ಚಂದ್ರಯಾನ-3 ಯಶಸ್ವಿ: ಬಿಜೆಪಿ ಕಛೇರಿಯಲ್ಲಿ ರಾಜ್ಯಾಧ್ಯಕ್ಷರ ಸಂಭ್ರಮ
ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ ಭಾರತ ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿದ್ದು ಇದರ ನೇರಪ್ರಸಾರವನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ವೀಕ್ಷಿಸಿ ವಿಜ್ಞಾನಿಗಳ ಗೆಲುವನ್ನು ಸಂಭ್ರಮಿಸಿ ಸಂತಸ ವ್ಯಕ್ತಪಡಿಸಿದರು.
ಹಾಗೂ ಈ ಸಂದರ್ಭದಲ್ಲಿ ಸಾಧನಾ ನುಡಿಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿಯವರ ಮಾತುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಎಂ, ಶ್ರೀ ಮೋನಪ್ಪ ಭಂಡಾರಿ, ಶ್ರೀ ಜಗದೀಶ್ ಶೇಣವ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
0 Comments