ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಮತ್ತು ವಿಶ್ವವಿದ್ಯಾಲಯ ಘಟಕ ಕಾಲೇಜು ಬನ್ನಡ್ಕ ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಎಸ್ ಕೆ ಎಫ್ ನ ಆಡಳಿತ ನಿರ್ದೇಶಕ ಡಾ, ಜಿ ರಾಮಕೃಷ್ಣ ಆಚಾರ್ ಧ್ವಜರೋಹಣಗೈದರು.
ನಂತರ ಮಾತನಾಡಿದ ಅವರು ಕಾಲೇಜು ವಿದ್ಯಾರ್ಥಿಗಳು ಶಿಕ್ಷಣದ ನಂತರ ಕೃಷಿ ಕ್ಷೇತ್ರದಲ್ಲಿ ತೊಡಗಿಕೊಳ್ಳುವುದರ ಮೂಲಕ ಉತ್ತಮ ಭವಿಷ್ಯವನ್ನು ಪಡೆಯಬೇಕು. ಎಂದು ಹೇಳಿದರು.
, ಪಡುಮಾರ್ನಾಡು ಗ್ರಾ.ಪಂಚಾಯತ್ ಸದಸ್ಯರಾದ ಟೆಸ್ಲೀನಾ ಮತ್ತು ನಿತಿನ್ ಶಾಲಾ ಹಳೆ ವಿದ್ಯಾರ್ಥಿ ಡಾಕ್ಟರ್ ಉಜ್ವಲ ಸುವರ್ಣ ದಾನಿಗಳಾದ ದಯಾನಂದ ಪೈ ಮತ್ತು ಬೋಳ ವಿಶ್ವನಾಥ ಕಾಮತ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ವಿ ಶೆಣೈ, ಕಾಲೇಜಿನ ಸಂಯೋಜನಾಧಿಕಾರಿ ಗಣಪತಿ ಗೌಡ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಪೋಷಕರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು ಕಾಲೇಜು ಮತ್ತು ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು
0 Comments