ಮೂಡುಬಿದಿರೆಯಲ್ಲಿ ನಾಳೆ ವಿಹಿಂಪ ಬಜರಂಗದಳದಿಂದ ಪಂಜಿನ ಮೆರವಣಿಗೆ
ಮೂಡುಬಿದಿರೆ: ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಜನಜಾಗೃತಿಗಾಗಿ ನಾಳೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡದ ವತಿಯಿಂದ ನಾಳೆ ಸಂಜೆ ಮೂಡುಬಿದಿರೆಯ ಸಾವಿರ ಕಂಬದ ಬಸದಿ ಬಳಿಯಿಂದ ಸ್ವರಾಜ್ಯ ಮೈದಾನದ ವರೆಗೆ ಪಂಜಿನ ಮೆರವಣಿಗೆ ನಡೆಯಲಿದೆ.
1947 ರ ಆಗಸ್ಟ್ 14 ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ ಕರಾಳ ರಾತ್ರಿಯ ದುರಂತವನ್ನು ನೆನಪಿಸುತ್ತಾ ಕಳೆದು ಹೋದ ಭಾಗಗಳನ್ನು ಮತ್ತೆ ಒಂದು ಗೂಡಿಸುವರೆಗೆ ಎಂಬ ವಾಕ್ಯದೊಂದಿಗೆ ಈ ಕಾರ್ಯಕ್ರಮ ನಡೆಯಲಿದ್ದು ವಿಹಿಂಪ ಬಜರಂಗದಳದ ಮಂಗಳೂರು ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
0 Comments