ಮಂಗಳೂರಿಗೆ ಮತ್ತಷ್ಟು ಯೋಜನೆ ಕೊಡಿ:ರೈಲ್ವೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದರು

ಜಾಹೀರಾತು/Advertisment
ಜಾಹೀರಾತು/Advertisment

 ಮಂಗಳೂರಿಗೆ ಮತ್ತಷ್ಟು ಯೋಜನೆ ಕೊಡಿ:ರೈಲ್ವೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದರು




ಮಂಗಳೂರಿಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್  ಅವರಿಗೆ ಮನವಿ ಸಲ್ಲಿಸಿದರು. ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ವಿಚಾರಕ್ಕೆ ಅಭಿನಂದಿಸಿದ ಸಂಸದರು ಮತ್ತಷ್ಟು ಯೋಜನೆಗಳನ್ನು ಜಿಲ್ಲೆಗೆ ನೀಡಬೇಕೆಂದು ಕೋರಿದರು.


ಸಂಸದರು ಬೇಡಿಕೆಯಿಟ್ಟ ಯೋಜನೆಗಳು...


⭕ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ ಮತ್ತು ಬೆಂಗಳೂರು - ಮಂಗಳೂರು ರೈಲ್ವೆ ಲೈನ್ ಮೇಲ್ದರ್ಜೆಗೆ ಮತ್ತು ವಿದ್ಯುದೀಕರಣ.

⭕ ಮಂಗಳೂರಿನಿಂದ ವಾರಣಾಸಿ, ಮಂಗಳೂರು-ರಾಮೇಶ್ವರಂ ಹಾಗೂ ಮಂಗಳೂರು ಬೀದರ್ ಮಧ್ಯೆ ಹೊಸ ರೈಲುಗಳು.

⭕ ತಿರುವಂತನಪುರಂನಿಂದ ಕಾಸರಗೋಡಿನ ತನಕ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಮಂಗಳೂರಿನ ತನಕ ವಿಸ್ತರಣೆ ಹಾಗೂ ಇದರಿಂದ ಎರಡು ನಗರಗಳ ಮಧ್ಯೆ ಶೀಘ್ರ ಸಂಪರ್ಕ, ಅಲ್ಲದೆ  ಪ್ರವಾಸೋದ್ಯಮಕ್ಕೆ ಬಹು ಅನುಕೂಲವಾಗಲಿದೆ.

⭕ಸುಬ್ರಹ್ಮಣ್ಯ ರೋಡ್‌ನಿಂದ ಮಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ಹೊಸ ರೈಲನ್ನು ಪ್ರಾರಂಭಕ್ಕೆ ಮನವಿ.

⭕ಸುಬ್ರಹ್ಮಣ್ಯದಲ್ಲಿ ಹೆಚ್ಚುವರಿ ಟರ್ಮಿನಲ್‌ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವ ಜತೆಗೆ, ಈ ಭಾಗದ ರೈಲ್ವೆ ಉನ್ನತೀಕರಣ ಸೇರಿದಂತೆ ಹಲವಾರು ಬೇಡಿಕೆಗಳನ್ನು ಸಚಿವರಿಗೆ ಸಲ್ಲಿಸಲಾಯಿತು.


ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಹಂತಹಂತವಾಗಿ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಸಂಸದರು ಹೇಳಿದ್ದಾರೆ.

Post a Comment

0 Comments