ಎ.ಸಿ., ಶೌಚಾಲಯ, ಲಿಫ್ಟ್, ಎಕ್ಸಿಲೇಟರ್,ಪಾರ್ಕ್‌:ಅದ್ಭುತ ಯೋಜನೆಯನ್ನೊಳಗೊಂಡ ರೈಲ್ವೆ ನಿಲ್ದಾಣವಾಗಲಿದೆ ಬಂಟ್ವಾಳ:ಸ್ಥಳ ವೀಕ್ಷಿಸಿದ ಸಂಸದರು

ಜಾಹೀರಾತು/Advertisment
ಜಾಹೀರಾತು/Advertisment


 ಎ.ಸಿ., ಶೌಚಾಲಯ, ಲಿಫ್ಟ್, ಎಕ್ಸಿಲೇಟರ್,ಪಾರ್ಕ್‌:ಅದ್ಭುತ ಯೋಜನೆಯನ್ನೊಳಗೊಂಡ ರೈಲ್ವೆ ನಿಲ್ದಾಣವಾಗಲಿದೆ ಬಂಟ್ವಾಳ:ಸ್ಥಳ ವೀಕ್ಷಿಸಿದ ಸಂಸದರು




ಬಂಟ್ವಾಳ:ಬಿಸಿರೋಡಿನಲ್ಲಿ  ಅಮೃತ್ ಭಾರತ್ ರೈಲ್ವೆ ನಿಲ್ದಾಣದ ಅಭಿವೃದ್ದಿಗಾಗಿ 26.18 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ. ಈ  ಮೂಲಕ  ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದ್ದು,ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು.



ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ದವರ ಜೊತೆ ಮಾತನಾಡಿ ಈ ವಿಚಾರವನ್ನು ತಿಳಿಸಿದರು.

 ನಮ್ಮ ಬೇಡಿಕೆಯಂತೆ  ಜಿಲ್ಲೆಯ

ಮೂರು ರೈಲ್ವೆ ನಿಲ್ದಾಗಳನ್ನು  ಅಭಿವೃದ್ಧಿ ಪಡಿಸಲು ಅನುದಾನ ಮಂಜೂರು ಮಾಡಿದ್ದಾರೆ‌. ಇದರಲ್ಲಿ  ಈಗಾಗಲೇ ಮಂಗಳೂರಿನ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಯ ಹಿನ್ನೆಲೆಯಲ್ಲಿ  ಶಿಲ್ಯಾನ್ಯಾಸ ಕಾರ್ಯಕ್ರಮ ಮಾಡಲಾಗಿದೆ. ಬಂಟ್ವಾಳದ ಈ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ 26.18 ಕೋಟಿ ರೂ ಅನುದಾನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ.ಇದರ ಮಾಸ್ಟರ್ ಪ್ಲಾನ್ ಕೂಡ ತಯಾರಿಸಿದೆ. ಸಂಪೂರ್ಣವಾಗಿ ಹೊಸ ಪರಿವರ್ತನೆಗೊಂಡು, ಮೂಲಭೂತ ಸೌಕರ್ಯಗಳಿಗೆ  ಶುಚಿತ್ವ ಆದ್ಯತೆ ಕೊಟ್ಟು ಜನರ ಇಚ್ಛೆಯಂತೆ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವುದಕ್ಕಾಗಿ ಹಣ ಬಿಡುಗಡೆ ಮಾಡಿದ್ದಾರೆ.

  ಜಿಲ್ಲೆಗೆ ವಂದೆ ಭಾರತ್  ರೈಲ್ವೆ ಯ ಬೇಡಿಕೆ ಇದ್ದು, ಪುತ್ತೂರುವರೆಗೆ ಇರುವ ರೈಲನ್ನು ಸುಬ್ರಹ್ಮಣ್ಯ ವರೆಗೆ ವಿಸ್ತರಣೆ ಮಾಡಬೇಕು ಎಂದು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದೇನೆ. ರೈಲ್ವೆ ಸಂಬಂಧಿಸಿದಂತೆ ಸಂಪೂರ್ಣ ಅಭಿವೃದ್ಧಿಗೆ ಸರಕಾರ ಬದ್ದವಾಗಿದೆ.

   ರಾಜೇಶ್ ನಾಯ್ಕ್ ಶಾಸಕರಾದ ಬಳಿಕ  ಬಂಟ್ವಾಳದ ಸಮಸ್ಯೆಗಳಿಗೆ ಕೇಂದ್ರದಿಂದ ಆಗಬೇಕಾದ  ಪರಿಹಾರಗಳನ್ನು ಮಾಡಿಕೊಡುವಂತೆ ಮನವಿ ಮಾಡಿದ್ದರು.ಅದರಂತೆ ಬಹುತೇಕ ಎಲ್ಲಾ ಸಮಸ್ಯೆಗಳಿಗೆ ಆದ್ಯತೆಯ ಮೇಲೆ ಕೇಂದ್ರದ ಮೂಲಕ ಅನುದಾನವನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

  

ಸುಸಜ್ಜಿತ ರೈಲ್ವೆ ನಿಲ್ದಾಣ: ಅಧಿಕಾರಿ ಸ್ಪಷ್ಟನೆ

  ಮಳೆಗಾಲದಲ್ಲಿ ಮಳೆ ನೀರು ಬೀಳದಂತೆ ಮೇಲ್ಚಾವಣಿ ನಿರ್ಮಾಣ, ಎರಡು ಸುಸಜ್ಜಿತ ಪ್ಲಾಟ್ ಫಾರಂ ನಿರ್ಮಾಣ , ಸುಸಜ್ಜಿತ ಕಟ್ಟಡ ನಿರ್ಮಾಣ, ಸರ್ಕ್ಯೂಲೇಟ್  ಏರಿಯಾ , ಪಾರ್ಕಿಂಗ್, ಪಾರ್ಕ್, ರಸ್ತೆ, ಶೌಚಾಲಯ, ಕ್ಯಾಂಟೀನ್ ಸಹಿತ ರೈಲ್ವೆ ಇಲಾಖೆಯ ಸಂಪೂರ್ಣ ವಾದ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಅವರು ಹೇಳಿದರು ‌.

   ಕಟ್ಟಡದ ಮುಂಭಾಗದಲ್ಲಿ ಗ್ರಾನೈಟ್ ಹಾಕಿ ಸ್ಚಚ್ಚ ಮಾಡಲಾಗುತ್ತದೆ ಎಂದು ಅವರು ಹೇಳಿದರು.

  ಪ್ಲಾಟ್ ಫಾರಂ ನಿಂದ ಇನ್ನೊಂದು ಪ್ಲಾಟ್ ಫಾರಂಗೆ ಹೋಗಲು ಲಿಪ್ಟ್ ಹಾಗೂ ಎಕ್ಸೀಲೇಟರ್ ಸಿಸ್ಟಮ್ ವ್ಯವಸ್ಥೆ ಮಾಡಲಾಗುತ್ತದೆ. ಪ್ರಯಾಣಿಕರಿಗೆ ನಿಲ್ಲುವ ದೃಷ್ಟಿಯಿಂದ ಉತ್ತಮ ರೂಮ್ ಮತ್ತು ಅದಕ್ಕೆ ಎ.ಸಿ.ವ್ಯವಸ್ಥೆ ಮಾಡಲಾಗುತ್ತದೆ ಎಂದು

ರೈಲ್ವೆ ಇಲಾಖೆಯ ಡೆಪ್ಯೂಟಿ ಚೀಫ್ ಇಂಜಿನಿಯರ್ ರಾಮಸುಬ್ಬಯ್ಯ ರೆಡ್ಡಿಹೇಳಿದರು.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಹರಿಕೃಷ್ಣ ಬಂಟ್ವಾಳ, ದೇವದಾಸ ಶೆಟ್ಟಿ, ದೇವಪ್ಪ ಪೂಜಾರಿ, ರವೀಶ್ ಶೆಟ್ಟಿ ಕರ್ಕಳ, ಸುದರ್ಶನ ಬಜ, ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಸಾವನ್ ಕುಮಾರ್ ಹಾಗೂ ಡೆಪ್ಯೂಟಿ ಅಪರೇಷನ್ ಮ್ಯಾನೇಜರ್ ಸರವಣ ಉಪಸ್ಥಿತರಿದ್ದರು.

Post a Comment

0 Comments