ಬೆಂಗಳೂರಿನಲ್ಲಿ ಅಲಾ....ಬುಡಿಯೆರ್ ಗೆ..... ರೈಲು ಏರಲಿವೆ ಕರಾವಳಿಯ ಕಂಬಳದ ಕೋಣಗಳು.

ಜಾಹೀರಾತು/Advertisment
ಜಾಹೀರಾತು/Advertisment

 ಬೆಂಗಳೂರಿನಲ್ಲಿ ಅಲಾ....ಬುಡಿಯೆರ್ ಗೆ.....

ರೈಲು ಏರಲಿವೆ ಕರಾವಳಿಯ ಕಂಬಳದ ಕೋಣಗಳು.




  ಮೂಡುಬಿದಿರೆ: ಅವಿಭಜಿತ ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಮಾತ್ರ ನಡೆಯುತ್ತಿದ್ದ ಕಂಬಳದ ಗೌಜಿ ಇನ್ನು ಬೆಂಗಳೂರಿನಂತಹ  ಸಿಟಿಯಲ್ಲೂ ಅಲಾ....ಬುಡಿಯೆರ್ ಗೆ ಎಂಬ ಕೂಗು ಕೇಳಿ ಬರಲಿದೆ ಅದಕ್ಕಾಗಿ ರೈಲು ಏರಲಿವೆ ಕರಾವಳಿಯ ಕೋಣಗಳು.

 ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು  ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಆಯೋಜಿಸಬೇಕೆಂಬ ಹಲವು ವರ್ಷದ ಕನಸೊಂದು ನನಸಾಗುವ ಹಂತಕ್ಕೆ ಬಂದಿದ್ದು, ಈ ಮೂಲಕ ಕಂಬಳ ಕ್ಷೇತ್ರದಲ್ಲಿ ಹೊಸ ಇತಿಹಾಸವೊಂದು ಸೃಷ್ಟಿಯಾಗಲಿದ್ದು ಐತಿಹಾಸಿಕ ಕ್ಷಣಕ್ಕೆ ಸಜ್ಜಾಗುತ್ತಿದೆ ಅರಮನೆ ಮೈದಾನ.


ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ಆರಂಭಗೊಂಡಿದೆ

ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ರೂವಾರಿ, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಸಿದ್ಧತೆ ನಡೆಯುತ್ತಿದೆ.


ಕಂಬಳ ಕರೆಗೆ ರಾಜ ಮಹಾರಾಜ 'ಜಯಚಾಮರಾಜೇಂದ್ರ ಒಡೆಯರ್‌ ಜೋಡುಕರೆ ಕಂಬಳ' ಎಂದು ಹೆಸರಿಡಲು ತೀರ್ಮಾನಿಸಲಾಗಿದೆ.  

 ಕರಾವಳಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಕಂಬಳ ಕ್ರೀಡೆಯು ಮತ್ತು ಕಂಬಳ ಓಟಗಾರರು ಇತ್ತೀಚಿನ ಕೆಲವು ವರ್ಷಗಳಿಂದ  ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದು ಇತ್ತೀಚಿನ ವರ್ಷಗಳಲ್ಲಿ ಕಂಬಳ ಕ್ರೀಡೆ ಹೊಸ ಹಿರಿಮೆಯನ್ನು ಪಡೆದುಕೊಂಡಿದ್ದು, ಹೊರ ಜಿಲ್ಲೆ, ಹೊರರಾಜ್ಯ, ದೇಶ-ವಿದೇಶಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ.


ಪೇಟಾ ಸಂಸ್ಥೆ ಕಂಬಳ ಕ್ರೀಡೆಗೆ ವಿರೋಧವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿ ನಿಷೇಧವಾದ ಸಂದರ್ಭ ಇಡೀ ಕರುನಾಡು ಮಾತ್ರವಲ್ಲದೆ ದೇಶಾದ್ಯಂತ ಕಂಬಳ ಪರ ಹೋರಾಟ ವ್ಯಕ್ತವಾಯಿತು. ಇದಾದ ಬಳಿಕ ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಕಂಬಳ ಕ್ರೀಡೆಗೆ ಗ್ರೀನ್‌ ಸಿಗ್ನಲ್‌ ನೀಡಿದ್ದು, ಸುಪ್ರೀಂ ಕೋರ್ಟ್‌ ಕೂಡಾ ಪೇಟಾ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಮೂಲಕ ಕಂಬಳ ಕ್ರೀಡೆಗೆ ದೊಡ್ಡ ಯಶಸ್ಸು ಸಿಕ್ಕಿತ್ತು. ಸುಮಾರು 3 ವರ್ಷಗಳಿಂದ ಕಂಬಳ ಕ್ರೀಡೆಯನ್ನು ರಾಜ್ಯ ರಾಜ್ಯಧಾನಿಯಲ್ಲಿ ಆಯೋಜಿಸಬೇಕೆಂಬ ಆಗ್ರಹ ವ್ಯಕ್ತವಾಗಿದ್ದು, ಅದಕ್ಕೆ ಈಗ ಕಾಲಕೂಡಿ ಬಂದಿದೆ.


ರಾಜ ಮನೆತನದ ಅನುಮತಿ:

ಬೆಂಗಳೂರು ತುಳು ಕೂಟ ಈ ಬಾರಿ ಸುವರ್ಣ ಸಂಭ್ರಮದಲ್ಲಿದ್ದು, ಇದರ ಸವಿ ನೆನಪಿಗಾಗಿ ಕಂಬಳ ಆಯೋಜನೆಗೆ ನಿರ್ಧರಿಸಲಾಗಿದೆ. ಉಪ್ಪಿನಂಗಡಿ ವಿಜಯ- ವಿಕ್ರಮ ಜೋಡುಕರೆ ಕಂಬಳದ ರೂವಾರಿ, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಸಿದ್ಧತೆ ನಡೆಯುತ್ತಿದೆ. ಮೈಸೂರಿನ ಒಡೆಯರ್‌ ಕುಟುಂಬಕ್ಕೆ ಸಂಬಂಧಪಟ್ಟ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೆ ಮೈಸೂರು ರಾಜಮನೆತನದಿಂದ ಅನುಮತಿ ಸಿಕ್ಕಿದ್ದು, ಸಮಿತಿಯು ಈಗಾಗಲೇ ಎರಡು ಸುತ್ತಿನ ಸಭೆ ನಡೆದಿದೆ. ಕಂಬಳಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದ್ದು, ಸರಕಾರಿ ಮಟ್ಟದಲ್ಲಿಅನುಮತಿ ಸಿಗಲು ಬಾಕಿಯಿದೆ. ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿಯಾಗುವುದಾಗಿ ಸಮಿತಿ ತಿಳಿಸಿದೆ.


ಅಂತಿಮ 8 ಸುತ್ತಿನ ಕೋಣಗಳು:

ಕಂಬಳದ ಎಲ್ಲ ವಿಭಾಗದ ಸ್ಪರ್ಧೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಕಳೆದ ಬಾರಿ ಅಂತಿಮ 8 ಸುತ್ತಿನಲ್ಲಿ ಸ್ಪರ್ಧಿಸಿದ ಕೋಣಗಳಿಗೆ ಪ್ರಥಮ ಪ್ರಾಶಸ್ತ್ಯದಲ್ಲಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಕೋಣದ ಯಜಮಾನರು, ಕಂಬಳ ಸಮಿತಿ, ಕಂಬಳ ಸಂಘಟಕರ ಜತೆ ಮಾತನಾಡಿ ಸಹಕಾರ ಕೋರಲಾಗುವುದು. ಕೋಣಗಳನ್ನು ರೈಲಿನಲ್ಲಿ ಸಾಗಾಟ ಮಾಡುವ ಬಗ್ಗೆಯೂ ಚರ್ಚೆಗಳು ನಡೆದಿದೆ.


ನವೆಂಬರ್‌ನಲ್ಲಿ ಕಂಬಳ ಆಯೋಜನೆ

ಬೆಂಗಳೂರು ಅರಮನೆ ಮೈದಾನದಲ್ಲಿ ಜೋಡುಕರೆ ಕಂಬಳ ಕರೆಗೆ, ಪಾರ್ಕಿಂಗ್‌ ವ್ಯವಸ್ಥೆ, ಏಕಕಾಲಕ್ಕೆ 4 ಲಕ್ಷ ಮಂದಿ ಪ್ರೇಕ್ಷಕರಿಗೆ ಬೇಕಾದಷ್ಟು ಜಾಗದ ವ್ಯವಸ್ಥೆಯಿದೆ. ತುಳುನಾಡಿನಲ್ಲಿ ಕಂಬಳ ಸೀಸನ್‌ ಆರಂಭವಾಗುವ ಮುನ್ನವೇ ಅಂದರೆ ನವೆಂಬರ್‌ನಲ್ಲಿ ಕಂಬಳ ಆಯೋಜನೆಗೆ ಚಿಂತನೆ ನಡೆದಿದೆ. ಅರಮನೆಯ ಮೈದಾನದ ಪಕ್ಕದಲ್ಲೇ ಕೆರೆಯಿದ್ದು, ಅದರ ನೀರನ್ನು ತಪಾಸಣೆಗೆ ಲ್ಯಾಬ್‌ಗೆ ಕಳುಹಿಸಲಾಗಿದೆ. 

 ನಮ್ಮ ರಾಜ್ಯಕ್ಕೆ  ಕಾರ್ಯಕ್ರಮದಲ್ಲಿ ತುಳುನಾಡಿನ ಆಹಾರ, ಸಂಸ್ಕೃತಿ-ಆಚಾರ ವಿಚಾರವನ್ನು ಪರಿಚಯಿಸುವ ಕೆಲಸವೂ ಆಗಲಿದೆ ಎಂದು ಪುತ್ತೂರು ಶಾಸಕ ಅಶೋಖ್ ರೈ ತಿಳಿಸಿದ್ದಾರೆ.

,

Post a Comment

0 Comments