60ನೇ ವರ್ಷದ ಮೂಡುಬಿದಿರೆ ಗಣೇಶೋತ್ಸವ -ಸೆ.19-23 ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಲೋಕ ಕಲ್ಯಾಣಕ್ಕಾಗಿ ಅಷ್ಟೋತ್ತರ ಸಹಸ್ರ ನಾಳಿಕೇರ ಅಷ್ಟದ್ರವ್ಯ ಗಣಯಾಗ
ಮೂ
ಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ಇದರ ವತಿಯಿಂದ 60ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 19 ರಿಂದ 23ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಲೋಕ ಕಲ್ಯಾಣಕ್ಕಾಗಿ ಅಷ್ಟೋತ್ತರ ಸಹಸ್ರ ನಾಳಿಕೇರ ಅಷ್ಟದ್ರವ್ಯ ಗಣಯಾಗದೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಕೆ. ಶ್ರೀಪತಿ ಭಟ್ ಅವರು ತಿಳಿಸಿದರು.
ಸಮಾಜ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು '1964 ರಲ್ಲಿ ಆರಂಭಗೊಂಡ ಮೂಡುಬಿದಿರೆ ಗಣೇಶೋತ್ಸವಕ್ಕೆ ಅದರದ್ದೇ ಆದ ಇತಿಹಾಸ ವಿದ್ದು ಐದು ದಿವಸಗಳಲ್ಲಿ ನಡೆಯುವ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ, ಸಮಯಕ್ಕೆ ಸರಿಯಾಗಿ ನಡೆಯಲಿದೆ' ಎಂದರು.
ಅರವತ್ತರ ಸಂಭ್ರಮದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮೂಡುಬಿದಿರೆ ಮಾತ್ರವಲ್ಲದೆ ಲೋಕಕಲ್ಯಾಣಕ್ಕಾಗಿ ಅಷ್ಟೋತ್ತರ ಸಹಸ್ರ ನಾಳಿಕೇರ ಅಷ್ಟದ್ರವ್ಯ ಗಣಯಾಗ ನಡೆಯಲಿದ್ದು ಇದಕ್ಕೆ ಸಂಬಂಧಿಸಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿದೆ ಎಂದರು.
19 ರಂದು ಬೆಳಿಗ್ಗೆ 10ರಿಂದ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು ಮೂಡುಬಿದಿರೆ ಜೈನ ಮಠದ ಮಹಾಸ್ವಾಮೀಜಿ ಯವರು ಆಶೀರ್ವಚನ ನೀಡಲಿದ್ದಾರೆ, ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣರು ದೀಪ ಪ್ರಜ್ವಲನ ಮಾಡಲಿದ್ದು ಮಂಗಳೂರು ಪೊಲೀಸ್ ಆಯುಕ್ತರು ಗೌರವ ಉಪಸ್ಥಿತ ರಿರಲಿದ್ದಾರೆ ಎಂದ ಅವರು ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ನಾರಾಯಣ ಪಿ.ಎಮ್. ಅವರು ಮಾತನಾಡಿ 'ಐದು ದಿವಸಗಳಲ್ಲಿ ನಡೆಯ ಲಿರುವ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ, ಪ್ರತಿದಿನ ಊಟ, ಉಪಹಾರದ ವ್ಯವಸ್ಥೆ ಇದೆ, ಕೊನೆಯದಿನ ನಡೆಯುವ ವಿಸರ್ಜನಾ ಪೂಜೆ ನಡೆದು ರಾತ್ರಿ 8 ಗಂಟೆಗೆ ಸರಿಯಾಗಿ ವೈಭವದ ಶೋಭಾಯಾತ್ರೆ ಮೂಲಕ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎಂದರು.
ಸಂಚಾಲಕರಾದ ರಾಜಾರಾಮ್ ನಾಗರಕಟ್ಟೆ, ಜತೆ ಕಾರ್ಯದರ್ಶಿ ಸುದರ್ಶನ ಎಮ್, ತೋಡಾರು ದಿವಾಕರ ಶೆಟ್ಟಿ, ಲಕ್ಷ್ಮಣ ಪೂಜಾರಿ, ರಾಜೇಶ್ ನಾಯ್ಕ್ ಮತ್ತಿತರರು ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
0 Comments