ಮೂಡುಬಿದಿರೆ ತುಳುಕೂಟದ ಅಧ್ಯಕ್ಷರಾಗಿ ಧನಕೀರ್ತಿ ಬಲಿಪ ಪುನರಾಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 




ಮೂಡುಬಿದಿರೆ ತುಳುಕೂಟದ ಅಧ್ಯಕ್ಷರಾಗಿ ಧನಕೀರ್ತಿ ಬಲಿಪ ಪುನರಾಯ್ಕೆ

ಮೂಡುಬಿದಿರೆ: ಪ್ರಗತಿಪರ ಕೃಷಿಕ,  ಸಾಮಾಜಿಕ ಮುಂದಾಳು ಹಂಡೇಲುಗುತ್ತು ಧನಕೀರ್ತಿ ಬಲಿಪ ಅವರು ಮೂಡುಬಿದಿರೆ  ತುಳುಕೂಟ(ರಿ)ದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ.  

ಕನ್ನಡ ಭವನದಲ್ಲಿರುವ ತುಳುಕೂಟದ ಕಛೇರಿಯಲ್ಲಿ ಇತ್ತೀಚೆಗೆ ನಡೆದ ಕೂಟದ ಮಹಾಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಗೌರವಾಧ್ಯಕ್ಷರಾಗಿರುವ ನ್ಯಾಯವಾದಿ ಬಾಹುಬಲಿ ಪ್ರಸಾದ್ ಅವರ ನೇತೃತ್ವದಲ್ಲಿ  ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 

ಡಾ.ಎಂ. ಮೋಹನ ಆಳ್ವ ಗೌರವಾಧ್ಯಕ್ಷರಾಗಿ, ಚಂದ್ರಹಾಸ ದೇವಾಡಿಗ ಕಾರ್ಯಾಧ್ಯಕ್ಷರಾಗಿ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಜಯಂತಿ ಎಸ್.ಬಂಗೇರ ಉಪಾಧ್ಯಕ್ಷರಾಗಿ, ಕೆ.ವೇಣುಗೋಪಾಲ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಸದಾನಂದ ನಾರಾವಿ ಜೊತೆ ಕಾರ್ಯದರ್ಶಿಯಾಗಿ, ಸುಭಾಶ್ಚಂದ್ರ ಚೌಟ ಕೋಶಾಧಿಕಾರಿಯಾಗಿ ಪುನರಾಯ್ಕೆಯಾಗಿರುತ್ತಾರೆ. ವಕೀಲರಾದ ಶ್ವೇತಾ ಜೈನ್ ಉಪಾಧ್ಯಕ್ಷರಾಗಿ ಮತ್ತು ಪ್ರತೀಕ್ ಸಾಲ್ಯಾನ್ ಹಾಗೂ ಪುಷ್ಪರಾಜ್ ಜೈನ್ ಅವರನ್ನು ಸಂಘಟನಾ ಕಾರ್ಯದರ್ಶಿಗಳಾಗಿ ಹೊಸದಾಗಿ ನೇಮಕ ಮಾಡಲಾಗಿದೆ.

ಜಿನೇಂದ್ರ ಜೈನ್, ಜಯಪ್ರಕಾಶ್ ಪಡಿವಾಳ್, ವಿಶ್ವನಾಥ ಬೋವಿ, ಸುರೇಶ್ ಕೋಟ್ಯಾನ್, ಯತಿರಾಜ್ ಶೆಟ್ಟಿ, ಪದ್ಮನಾಭ ಮಿಜಾರು, ಗುರು ಎಂ.ಪಿ, ಪ್ರಸಾದ್ ಭಂಡಾರಿ, ಚೇತನಾ ಹೆಗ್ಡೆ, ಸುಮ ಸಿ.ದೇವಾಡಿಗ ಮತ್ತು ನಾರಾಯಣ ಕುಂದರ್ ಅವರನ್ನು ಕಾರ್ಯಕಾರಿ ಸಮಿತಿಯ ನೂತನ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

Post a Comment

0 Comments