ನಾಳೆಯಿಂದ ಆಳ್ವಾಸ್ ಪ್ರಗತಿ- 2023
ಬೃಹತ್ ಉದ್ಯೋಗ ಮೇಳಕ್ಕೆ ಆಳ್ವಾಸ್ ಕ್ಯಾಂಪಸ್ ಸಜ್ಜು
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್ನಲ್ಲಿ ನಾಳೆಯಿಂದ ಎರಡು ದಿನ ನಡೆಯಲಿರುವ ಆಳ್ವಾಸ್ ಪ್ರಗತಿ -2023 ಬೃಹತ್ ಉದ್ಯೋಗ ಮೇಳಕ್ಕೆ ಆಳ್ವಾಸ್ ಕ್ಯಾಂಪಸ್ ಸಜ್ಜಾಗಿದೆ.
13,600ಕ್ಕೂ ಅಧಿಕ ಹುದ್ದೆಗಳು,203 ಕ್ಕೂ ಹೆಚ್ಚು ಪ್ರಸಿದ್ಧ ಬಹುರಾಷ್ಟ್ರೀಯ ಹಾಗೂ ಸ್ಥಳೀಯ ಸೇರಿದಂತೆ ವಿವಿಧ ವಲಯಗಳ ಕಂಪೆನಿಗಳ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.ಆಳ್ವಾಸ್ ಪದವಿಪೂರ್ವ ಕಾಲೇಜಿನ ಆವರಣ ಹಾಗೂ ಗ್ರಂಥಾಲಯ ಬ್ಲಾಕ್ನಲ್ಲಿ ಉದ್ಯೋಗ ಮೇಳದ ಸಂದರ್ಶನ, ಪರೀಕ್ಷೆ ಇತ್ಯಾದಿಗಳಿಗೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಬೆಳಿಗ್ಗೆ 9.30ಕ್ಕೆ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಯೋಗ ಮೇಳ ಉದ್ಘಾಟಿಸಲಿರುವರು. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಬಂಟ್ವಾಳ ಶಾಸಕ ಯು. ರಾಜೇಶ್ ನಾಯ್ಕ್, ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹಾಗೂ ಕೆ. ಹರೀಶ್ ಕುಮಾರ್ ಮುಖ್ಯ ಅತಿಥಿಯಾಗಿರುವರು. ಯುಎಇ ಮೂಲದ ಬುರ್ಜಿಲ್ ಹೋಲ್ಡಿಂಗ್ಸ್ನ ಮಾನವ ಸಂಪನ್ಮೂಲದ ಸಮೂಹ ಮುಖ್ಯಸ್ಥ ಡಾ. ಸಂಜಯ್ಕುಮಾರ್, ಅಲೆಂಬಿಕ್ ಫಾರ್ಮಾಸ್ಯುಟಿಕಲ್ಸ್ ಮಾನವ ಸಂಪನ್ಮೂಲದ ಸಹ ಉಪಾಧ್ಯಕ್ಷ ಅರವಿಂದ ತ್ರಿಪಾಠಿ, ಫ್ಯಾಕ್ಟ್ಸೆಟ್ ಸಿಸ್ಟಮ್ ಇಂಡಿಯಾ ಪ್ರೆöÊ. ಲಿ. ಹಾಗೂ ಭಾರತ ಮತ್ತು ಫಿಲಿಫೈನ್ಸ್ ಟಾಲೆಂಟ್ ಅಕ್ವಸಿಷನ್ ಉಪಾಧ್ಯಕ್ಷ ಅನುಪ್ಮ ರಂಜನ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು.
ವೈದ್ಯಕೀಯ, ಅರೆ ವೈದ್ಯಕೀಯ, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಮತ್ತು ಆಡಳಿತ ನಿರ್ವಹಣೆ, ಮೂಲ ವಿಜ್ಞಾನ, ನರ್ಸಿಂಗ್, ಐಟಿಐ, ಡಿಪ್ಲೊಮಾ ಹಾಗೂ ಕೌಶಲ ಹೊಂದಿದ ಪಿಯುಸಿ ಮತ್ತು ಎಸ್ಎಸ್ಎಲಿ ್ಸಅರ್ಹತೆ ಹೊಂದಿದವರು ಸೇರಿದಂತೆ ಎಲ್ಲ ಪದವಿ ಹಾಗೂ ಸ್ನಾತಕ ಪದವೀಧರರಿಗೆ 'ಆಳ್ವಾಸ್ ಪ್ರಗತಿ -2023' ಯು ಅತ್ಯುತ್ತಮ ಉದ್ಯೋಗಳ ಬೃಹತ್ ಅವಕಾಶವನ್ನು ಕಲ್ಪಿಸಿದೆ.ಔದ್ಯೋಗಿಕ ಉನ್ನತೀಕರಣ ಕೇಂದ್ರವನ್ನು ಸ್ಥಾಪಿಸಲಾಗಿದ್ದು, 120 ಮಂದಿ ಕಾರ್ಯ ನಿರ್ವಹಿಸಲಿದ್ದಾರೆ. ಅವರಿಗೆ ಎಂಟು ದಿನಗಳ ಕಾಲ ಕಾರ್ಪೊರೇಟ್ ತರಬೇತಿ ನೀಡಲಾಗಿದೆ. 200 ಮಂದಿ ಸಿಬ್ಬಂದಿ ಸೇರಿದಂತೆ 700 ಮಂದಿ ಸ್ವಯಂ ಸೇವಕರಾಗಿ ಸಹಕರಿಸಲಿದ್ದಾರೆ.
ವಿದ್ಯಾರ್ಥಿಗಳ ಅರ್ಹತೆಗೆ ಅನುಗುಣವಾಗಿ ಸಪ್ತವರ್ಣವಿನ್ಯಾಸ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಗೆ 'ಕೆಂಪು', ಐಟಿಐಗೆ 'ಕಿತ್ತ¼'ೆ, ಡಿಪ್ಲೊಮಾಗೆ 'ಪಿಂಕ್', ಪದವೀಧರರಿಗೆ 'ಹಸಿರು', ಎಂಜಿನಿಯರಿAಗ್ಗೆ 'ನೀಲಿ', ನರ್ಸಿಂಗ್ ಮತ್ತು ಅರೆವೈದ್ಯಕೀಯಕ್ಕೆ 'ಬಿಳಿ', ಸ್ನಾತಕೋತ್ತರ ಪದವೀಧರರಿಗೆ 'ಹಳದಿ' ಬಣ್ಣವನ್ನು ನೀಡಲಾಗಿದೆ. ಈ ಬಣ್ಣದ ವ್ಯವಸ್ಥೆಯು ನಿರ್ದಿಷ್ಟ ಅರ್ಹತೆಯ ಹುದ್ದೆಗಳಿಗೆ ಆಯ್ಕೆ ಮಾಡಲು ಸಹಕಾರಿಯಾಗಲಿದೆ.
ಔದ್ಯೋಗಿಕ ವಲಯ ಆಧಾರದಲ್ಲಿ ಕೈಪಿಡಿಯನ್ನು ಮುದ್ರಿಸಲಾಗಿದ್ದು, ಈ ಪುಸ್ತಕದಲ್ಲಿ ಕಂಪೆನಿಯ ಹೆಸರು, ಹುದ್ದೆಯ ಹೆಸರು, ಖಾಲಿ ಇರುವ ಹುದ್ದೆಗಳು, ಅರ್ಹತೆ, ಕೋರ್ಸ್, ವೇತನದ ವಿವರ, ಅನುಭವ, ಉದ್ಯೋಗದ ಸ್ಥಳ ಹಾಗೂ ಸಂದರ್ಶನ ನಡೆಯುವ ಕೊಠಡಿಯ ಸಂಖ್ಯೆಯನ್ನು ನೀಡಲಾಗಿದೆ. ಈ ಕೈಪಿಡಿಯು ಆಕಾಂಕ್ಷಿಗಳಿಗೆ ನೆರವಾಗಲಿದೆ.
ಆವರಣದ ವಿವಿಧೆಡೆ 'ಕ್ಯು-ಆರ್ ಕೋಡ್' ಫಲಕಗಳನ್ನು ಹಾಕಲಾಗಿದ್ದು, ಸ್ಕಾö್ಯನ್ ಮಾಡಿದರೆ ವಿದ್ಯಾರ್ಹತೆಗೆ ಅನುಗುಣವಾಗಿ ಇರುವ ಕಂಪೆನಿ ಹಾಗೂ ಉದ್ಯೋಗಗಳ ಮಾಹಿತಿಯನ್ನು ತಕ್ಷಣವೇ ಪಡೆಯಬಹುದಾಗಿದೆ.
ನೋಂದಣಿ ಮಾಡಿಕೊಂಡ 8732 ಉದ್ಯೋಗಾಂಕ್ಷಿಗಳಿಗೆ ಎಸ್ಸೆಮ್ಮೆಸ್ ಮೂಲಕ ನೋಂದಣಿ ಸಂಖ್ಯೆಯನ್ನು ಕಳುಹಿಸಿಕೊಡಲಾಗಿದೆ.
ಸುರಕ್ಷತೆ ಹಾಗೂ ನಿರ್ವಹಣೆಗಾಗಿ ಕೇಂದ್ರೀಕೃತ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದ್ದು, ಪ್ರಗತಿ ನಡೆಯುವ ಆವರಣದ ಎಲ್ಲೆಡೆ ಸಿಸಿಟಿವಿ ಕ್ಯಾಮೆರಾ ಹಾಕಲಾಗಿದೆ. 320ಕ್ಕೂ ಅಧಿಕ ಕೊಠಡಿಗಳನ್ನು ನೀಡಲಾಗಿದೆ. ಮಾಹಿತಿಗಾಗಿ ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದೆ. ಸಂದರ್ಶನ ಹಾಗೂ ಪರೀಕ್ಷೆ ನಡೆಸುವ ವಿವಿಧ ಕಂಪೆನಿಗಳ 560ಕ್ಕೂ ಅಧಿಕ ಮಾನವ ಸಂಪನ್ಮೂಲ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದು, ಪ್ರಯಾಣ ಹಾಗೂ ವಾಸ್ತವ್ಯದ ವ್ಯವಸ್ಥೆಯನ್ನು ಮಾಡಲಾಗಿದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳ ವಸತಿಗಾಗಿ 1500 ಕೊಠಡಿಗಳನ್ನು ಮೀಸಲು ಇರಿಸಲಾಗಿದೆ. ಮೂಡುಬಿದಿರೆ ಮಾತ್ರವಲ್ಲದೇ, ಪುತ್ತೂರು, ಬೆಳ್ತಂಗಡಿ ಮತ್ತು ಮಂಗಳೂರು ಶಾಸಕರು 'ಪ್ರಗತಿ'ಗೆ ಪ್ರೋತ್ಸಾಹ ನೀಡಿದ್ದು, ಆಯಾ ಸ್ಥಳದಿಂದ ಬರಲು ವಿದ್ಯಾರ್ಥಿಗಳಿಗೆ ಆಳ್ವಾಸ್ ಸಂಸ್ಥೆಯು ಬಸ್ಗಳ ವ್ಯವಸ್ಥೆಯನ್ನು ಮಾಡಿದೆ. ಉಡುಪಿಗೂ ಬಸ್ ವ್ಯವಸ್ಥೆ ಮಾಡಲಾಗಿದೆ.
ದಕ್ಷಿಣ ಕನ್ನಡ ಹಾಗೂ ಸುತ್ತಲ ಜಿಲ್ಲೆಗಳ ವಿವಿಧ ಕೇಂದ್ರಗಳಲ್ಲಿ ಶಾಸಕರ ನೇತೃತ್ವದಲ್ಲಿ ಕಾಲೇಜು, ಐಟಿಐಗಳ ಪ್ರಾಂಶುಪಾಲರ ಸಭೆ ನಡೆಸಲಾಗಿದೆ.
0 Comments