ಬಜಪೆ ಪೊಲೀಸರ ಕಾರ್ಯಚರಣೆ : ವಿವಿಧ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಐವರ ಬಂಧನ

ಜಾಹೀರಾತು/Advertisment
ಜಾಹೀರಾತು/Advertisment
ಬಜಪೆ ಪೊಲೀಸರ ಕಾರ್ಯಚರಣೆ : ವಿವಿಧ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಐವರ ಬಂಧನ



ಮೂಡುಬಿದಿರೆ :   ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಪೋರ್ಕೊಡಿ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್ ಮತ್ತು ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್ ಎಂಬವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ  ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವುದರಿಂದ ಇವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.  
ಕಳೆದ ವಾರ  ಕೊಳಂಬೆ ಗ್ರಾಮದ ಫನಾ ಕಾಲೇಜ್ ಬಳಿ ಹಾಗು ಕಂದಾವರ ಗ್ರಾಮದ ಅದ್ಯಪಾಡಿದ್ವಾರದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಬಡಗುಳಿಪಾಡಿ ಗ್ರಾಮದ ನಿವಾಸಿ ರಾಹಿಲ್ ಮೊಯಿದ್ದೀನ್‌ ಶರೀಫ್‌, ಮೂಡುಪೆರಾರ ಗ್ರಾಮದ ಗುರುಕಂಬಳದ ನಿವಾಸಿ ಮುಲ್ಲಾ ಅಬ್ದುಲ್‌ ಅಮನ್ ಮತ್ತು ಕಂದಾವರ ಗ್ರಾಮದ ಅಮಾನುಲ್ಲಾ ಕಂಪೌಂಡ್ ನಿವಾಸಿ ಮೊಹಮ್ಮದ್ ಶಾಹಿನ್ ಎಂಬವರನ್ನು ವಶಕ್ಕೆ ಪಡೆದು ಇವರ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಗರವನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿ ಮಾಡಲು ದೃಢನಿರ್ಧಾರವನ್ನು ಕೈಗೊಂಡಿರುವ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್, ಡಿ.ಸಿ.ಪಿ  ಸಿದ್ಧಾರ್ಥ ಗೋಯಲ್‌, ದಿನೇಶ್‌ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಬಜಪೆ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೀಪ ರವರ ತಂಡ ಈ  ಕಾರ್ಯಾಚರಣೆಯಲ್ಲಿ ಪಾಲ್ಹೊಂಡಿತ್ತು.

Post a Comment

0 Comments