ರಾಷ್ಟ್ರೀಯ ಮಲ್ಲಕಂಬ ಕ್ರೀಡೆಗೆ ರಾಜ್ಯ ತಂಡ ಆಯ್ಕೆ
* ಆಳ್ವಾಸ್ನ 6 ಕ್ರೀಡಾಪಟುಗಳು ಆಯ್ಕೆ
ಮೂಡಬಿದಿರೆ: ಅ.26ರಿಂದ ಗೋವಾದಲ್ಲಿ ನಡೆಯಲಿರುವ 37ನೇ ರಾಷ್ಟ್ರೀಯ ಮಲ್ಲಕಂಬ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯ ಮಲ್ಲಕಂಬ ತಂಡಕ್ಕಾಗಿ ಒಟ್ಟು 12 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಲ್ಲಕಂಬ ತಂಡದ ಬಾಲಕರಾದ ಹನುಮಂತ್ ಎಂ, ಆಕಾಶ್ ಪಿ, ವಿನಾಯಕ್ ಕೆ. ಹಾಗೂ ಬಾಲಕಿಯರ ವಿಭಾಗದಲ್ಲಿ ಭಾಗ್ಯಶ್ರೀ ಎಸ್, ದೊಡ್ಡಮ್ಮ ಪಿ, ಕಾವೇರಿ ಎಸ್, ಸೇರಿ ಒಟ್ಟು 6 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಕರ್ನಾಟಕ ಮಲ್ಲಕಂಬ ಅಸೋಸಿಯೇಷನ್ನ ಆಶ್ರಯದಲ್ಲಿ ದಿನಾಂಕ ಅ.1ರಂದು ಬಾಗಲಕೋಟೆ ಜಿಲ್ಲೆಯ ತುಳಸಿಗಿರಿ ಉದ್ದಂಡಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಸಮಾವೇಶದಲ್ಲಿ ಈ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಆಯ್ಕೆಯಾದ 6 ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಚಿತ ಶಿಕ್ಷಣ ಯೋಜನೆಯಡಿ ನಾಲ್ಕನೇ ತರಗತಿಯಿಂದ ಸ್ನಾತಕೋತ್ತರ ತರಗತಿಯವರೆಗೆ ಅಧ್ಯಯನ ನಡೆಸುತ್ತಿದ್ದಾರೆ. ಮಲ್ಲಕಂಬ 110 ವಿದ್ಯಾರ್ಥಿಗಳ ತಂಡದ ಸದಸ್ಯರಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
0 Comments